ಮನೆಗೆ ಬಂದ ಇಬ್ಬರು ಬುರ್ಖಾಧಾರಿ ಮಹಿಳೆಯರು ಕೋಣೆಯಲ್ಲಿ ಮಲಗಿದ್ದ ಮಗುವನ್ನು ಕಳ್ಳತನ ಮಾಡಲು ಯತ್ನಿಸಿರುವ ಘಟನೆ ಬೆಳಪು ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ.
ಮೊಹಮ್ಮದಾಲಿ ಎಂಬವರ ಮನೆಗೆ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಬಂದು ನಮಗೆ ಶೌಚಾಲಯಕ್ಕೆ ಹೋಗಬೇಕು ಎಂದು ಹೇಳಿದ್ದು, ಅದರಲ್ಲಿ ಇನ್ನೊಬ್ಬಳು ಮಹಿಳೆ ಮನೆಯ ಒಳಗೆ ಹೋಗಿ ತೊಟ್ಟಿಲಲ್ಲಿ ಮಲಗಿದ್ದ ಮುಹಮ್ಮದಾಲಿಯ ತಮ್ಮನ ಮಗುವನ್ನು ಎತ್ತಿಕೊಂಡು ಓಡಿ ಹೋಗಲು ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಆಗ ಮನೆಯಲ್ಲಿದ್ದ ತಾಬೂರಿಸ್ ಎಂಬವರು ತಡೆದಾಗ ಆಕೆಯನ್ನು ದೂಡಿ, ಮಗುವನ್ನು ನೆಲದಲ್ಲಿ ಬಿಟ್ಟು ಇಬ್ಬರು ಪರಾರಿಯಾದರೆಂದು ದೂರಲಾಗಿದೆ. ಇದರಿಂದ ತಾಬೂರಿಸ್ಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.ಈ ಬಗ್ಗೆ ಮಗುವಿನ ತಾಯಿ ಸೀಮಾ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…