ಜನ ಮನದ ನಾಡಿ ಮಿಡಿತ

Advertisement

ಭುವನೇಶ್ವರ: ಸಿಡಿಲು ಬಡಿದು 9 ಜನ ಸಾವು ; ಹಲವರಿಗೆ ಗಾಯ

ಒಡಿಶಾದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಅರು ಮಹಿಳೆಯರು ಸೇರಿ ಒಂಬತ್ತು ಮಂದಿ ಮೃತಪಟ್ಟಿದ್ದು. ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಡರಾತ್ರಿ ಭಾರಿ ಮಳೆಯಾಗಿದ್ದು, ಕೊರಾಪುಟ್ ಜಿಲ್ಲೆಯಲ್ಲಿ ಮೂವರು, ಜಾಜ್‌ ಪುರ ಮತ್ತು ಗಂಜಾಂ ಜಿಲ್ಲೆಗಳಲ್ಲಿ ತಲಾ ಇಬ್ಬರು ಧೆಂಕನಲ್ ಮತ್ತು ಗಜಪತಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಜಾಜ್ಪುರ ಜಿಲ್ಲೆಯಲ್ಲಿ, ಧರ್ಮಸಾಲಾ ಪ್ರದೇಶದಲ್ಲಿ ಸಿಡಿಲು ಬಡಿದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಗಂಜಾಂ ಜಿಲ್ಲೆಯ ಕಬಿಸೂರ್ಯನಗರದಲ್ಲಿ ಸಿಡಿಲು ಬಡಿದು 7ನೇ ತರಗತಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಳಗುಂತ ಪ್ರದೇಶದಲ್ಲಿ ಮಾವಿನ ಹಣ್ಣುಗಳನ್ನು ಸಂಗ್ರಹಿಸುತ್ತಿದ್ದ ಮಹಿಳೆಯೊಬ್ಬರಿಗೆ ಸಿಡಿಲು ಬಡಿದು ಮೃತಪಟ್ಟರೆ, ಧೆಂಕನಲ್‌ನ ಕುಸುಮುಂಡಿಯಾ ಗ್ರಾಮದಲ್ಲಿ ಸಿಡಿಲು ಬಡಿದು ಮತ್ತೋರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಗಜಪತಿ ಜಿಲ್ಲೆಯಲ್ಲಿ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಈ ಸಂಬಂಧ ಅಸಹಜ ಸಾವು ಪ್ರಕರಣದಡಿ ದೂರು ದಾಖಲಿಸಿಕೊಂಡು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊರಾಪುಟ್, ಕಟಕ್, ಖುರ್ದಾ, ನಯಾಗಢ, ಜಾಜ್‌ ಪುರ, ಬಾಲಸೋರ್ ಮತ್ತು ಗಂಜಾಂ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!