ಒಡಿಶಾದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಅರು ಮಹಿಳೆಯರು ಸೇರಿ ಒಂಬತ್ತು ಮಂದಿ ಮೃತಪಟ್ಟಿದ್ದು. ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಡರಾತ್ರಿ ಭಾರಿ ಮಳೆಯಾಗಿದ್ದು, ಕೊರಾಪುಟ್ ಜಿಲ್ಲೆಯಲ್ಲಿ ಮೂವರು, ಜಾಜ್ ಪುರ ಮತ್ತು ಗಂಜಾಂ ಜಿಲ್ಲೆಗಳಲ್ಲಿ ತಲಾ ಇಬ್ಬರು ಧೆಂಕನಲ್ ಮತ್ತು ಗಜಪತಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಜಾಜ್ಪುರ ಜಿಲ್ಲೆಯಲ್ಲಿ, ಧರ್ಮಸಾಲಾ ಪ್ರದೇಶದಲ್ಲಿ ಸಿಡಿಲು ಬಡಿದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಗಂಜಾಂ ಜಿಲ್ಲೆಯ ಕಬಿಸೂರ್ಯನಗರದಲ್ಲಿ ಸಿಡಿಲು ಬಡಿದು 7ನೇ ತರಗತಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಳಗುಂತ ಪ್ರದೇಶದಲ್ಲಿ ಮಾವಿನ ಹಣ್ಣುಗಳನ್ನು ಸಂಗ್ರಹಿಸುತ್ತಿದ್ದ ಮಹಿಳೆಯೊಬ್ಬರಿಗೆ ಸಿಡಿಲು ಬಡಿದು ಮೃತಪಟ್ಟರೆ, ಧೆಂಕನಲ್ನ ಕುಸುಮುಂಡಿಯಾ ಗ್ರಾಮದಲ್ಲಿ ಸಿಡಿಲು ಬಡಿದು ಮತ್ತೋರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಗಜಪತಿ ಜಿಲ್ಲೆಯಲ್ಲಿ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಈ ಸಂಬಂಧ ಅಸಹಜ ಸಾವು ಪ್ರಕರಣದಡಿ ದೂರು ದಾಖಲಿಸಿಕೊಂಡು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊರಾಪುಟ್, ಕಟಕ್, ಖುರ್ದಾ, ನಯಾಗಢ, ಜಾಜ್ ಪುರ, ಬಾಲಸೋರ್ ಮತ್ತು ಗಂಜಾಂ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…