ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮದ್ಯ,ಬಿಯರ್ ದರ ಏರಿಕೆ; ವೈನ್ ಮರ್ಚೆಂಟ್ ಅಸೋಸಿಯೇಷನ್ ಅಸಮಾಧಾನ

ರಾಜ್ಯ ಸರ್ಕಾರ ನಾಲ್ಕನೇ ಬಾರಿ ಬಿಯರ್ ದರ ಏರಿಕೆ ಮಾಡುತ್ತಿದೆ. ಐಎಂಎಲ್ ದರವನ್ನು ಎರಡು ಬಾರಿ ಏರಿಕೆ ಮಾಡಿದೆ. ಈ ಬಗ್ಗೆ ಕಾನೂನು ಹೋರಾಟಕ್ಕೂ ಅವಕಾಶ ಇಲ್ಲ. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ.

ಆದರೆ ನಮ್ಮ ಯಾವ ಬೇಡಿಕೆಯನ್ನೂ ಈಡೇರಿಸಿಲ್ಲ ಎಂದು ವೈನ್ ಮಚೆರ್ಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿಗಳು ಮೇ21ಕ್ಕೆ ಸಭೆ ಕರೆದಿದ್ದಾರೆ. ಮತ್ತೊಮ್ಮೆ ಅವರಲ್ಲಿ ಮನವಿ ಮಾಡುತ್ತೇವೆ. ಸರಕಾರ ಆದಾಯದ ದೃಷ್ಟಿಯಿಂದ ಈ ರೀತಿ ಮಾಡುತ್ತಿದೆ. ಚೀಪರ್ ಮದ್ಯ ಹಾಗೂ ಬಿಯರ್‍ನ ಮೇಲೆ ದರ ಏರಿಕೆ ಮಾಡಲಾಗಿದೆ. ಸರ್ಕಾರದ ನೋಟಿಫಿಕೇಶನ್‍ಗೆ ನಾವು ಆಕ್ಷೇಪ ಹಾಕಿದ್ದೆವು. 2012ರಿಂದ 6 ಬಾರಿ ಈ ಸ್ಲಾಬ್ ಗಳಿಗೆ ದರ ಏರಿಕೆ ಮಾಡಿದ್ದಾರೆ. ಚೀಪರ್ ಸ್ಲಾಬ್ ಬಳಸುವವರು ಕೂಲಿ ಕಾರ್ಮಿಕರು. ಯಾವ ಸ್ಲಾಬ್‍ನಲ್ಲಿ ಸೇಲ್ಸ್ ಜಾಸ್ತಿ ಇದೆಯೋ ಆ ದರವನ್ನೇ ಏರಿಸುತ್ತಿದ್ದಾರೆ. ಇನ್ನು ಅಬಕಾರಿ ಶುಲ್ಕವನ್ನೂ ಜಾಸ್ತಿ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ, ಇದಕ್ಕೆ ನಮ್ಮ ವಿರೋಧ ಇದೆ
ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!