ರಾಜ್ಯ ಸರ್ಕಾರ ನಾಲ್ಕನೇ ಬಾರಿ ಬಿಯರ್ ದರ ಏರಿಕೆ ಮಾಡುತ್ತಿದೆ. ಐಎಂಎಲ್ ದರವನ್ನು ಎರಡು ಬಾರಿ ಏರಿಕೆ ಮಾಡಿದೆ. ಈ ಬಗ್ಗೆ ಕಾನೂನು ಹೋರಾಟಕ್ಕೂ ಅವಕಾಶ ಇಲ್ಲ. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ.
ಆದರೆ ನಮ್ಮ ಯಾವ ಬೇಡಿಕೆಯನ್ನೂ ಈಡೇರಿಸಿಲ್ಲ ಎಂದು ವೈನ್ ಮಚೆರ್ಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿಗಳು ಮೇ21ಕ್ಕೆ ಸಭೆ ಕರೆದಿದ್ದಾರೆ. ಮತ್ತೊಮ್ಮೆ ಅವರಲ್ಲಿ ಮನವಿ ಮಾಡುತ್ತೇವೆ. ಸರಕಾರ ಆದಾಯದ ದೃಷ್ಟಿಯಿಂದ ಈ ರೀತಿ ಮಾಡುತ್ತಿದೆ. ಚೀಪರ್ ಮದ್ಯ ಹಾಗೂ ಬಿಯರ್ನ ಮೇಲೆ ದರ ಏರಿಕೆ ಮಾಡಲಾಗಿದೆ. ಸರ್ಕಾರದ ನೋಟಿಫಿಕೇಶನ್ಗೆ ನಾವು ಆಕ್ಷೇಪ ಹಾಕಿದ್ದೆವು. 2012ರಿಂದ 6 ಬಾರಿ ಈ ಸ್ಲಾಬ್ ಗಳಿಗೆ ದರ ಏರಿಕೆ ಮಾಡಿದ್ದಾರೆ. ಚೀಪರ್ ಸ್ಲಾಬ್ ಬಳಸುವವರು ಕೂಲಿ ಕಾರ್ಮಿಕರು. ಯಾವ ಸ್ಲಾಬ್ನಲ್ಲಿ ಸೇಲ್ಸ್ ಜಾಸ್ತಿ ಇದೆಯೋ ಆ ದರವನ್ನೇ ಏರಿಸುತ್ತಿದ್ದಾರೆ. ಇನ್ನು ಅಬಕಾರಿ ಶುಲ್ಕವನ್ನೂ ಜಾಸ್ತಿ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ, ಇದಕ್ಕೆ ನಮ್ಮ ವಿರೋಧ ಇದೆ
ಎಂದು ಅವರು ಹೇಳಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…