ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ವಧುವಿಗೆ ವರ ತಾಳಿ ಕಟ್ಟಿದ ಕೇವಲ 15 ನಿಮಿಷಗಳಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ವರ ಪ್ರವೀಣ ಕುರಣಿ (25) ಎಂದು ತಿಳಿದು ಬಂದಿದೆ.
ಪ್ರವೀಣ ಕುರಣಿ ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿಯಾಗಿದ್ದು, ಈ ಘಟನೆ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ. ವರನ ಹಠಾತ್ ನಿಧನ ಎರಡೂ ಕುಟುಂಬಗಳಿಗೆ ಆಘಾತ ತಂದಿದೆ. ಹೌದು, ಇಡೀ ನಂದೀಕೇಶ್ವರ ಕಲ್ಯಾಣ ಮಂಟಪದಲ್ಲಿ ಎರಡು ಕುಟುಂಬದವರು ಮದುವೆ ಸಂಭ್ರಮದಲ್ಲಿ ಬ್ಯುಸಿಯಾಗಿದ್ದರು. ಆದರೆ, ಈ ಸಂಭ್ರಮ ಬಹಳ ಕಾಲ ಉಳಿಯಲೇ ಇಲ್ಲ. ಹೊಸ ಜೀವನ ಆರಂಭಿಸೋ ಮೊದಲೇ ವರ ಬದುಕಿಗೆ ವಿದಾಯ ಹೇಳಿದ ಹೇಳಿದ್ದಾನೆ.
ತಾಳಿ ಕಟ್ಟಿ ಕೇವಲ 15 ನಿಮಿಷದಲ್ಲೇ ವರನಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಬೇಕು ಎನ್ನುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಜೀವ ಬಿಟ್ಟಿದ್ದಾನೆ. ಇನ್ನೂ ಬಾಳಿ ಬದುಕಬೇಕಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…