ರಾಜ್ಯ

ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಅಸುನೀಗಿದ ವರ

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ವಧುವಿಗೆ ವರ ತಾಳಿ ಕಟ್ಟಿದ ಕೇವಲ 15 ನಿಮಿಷಗಳಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ವರ ಪ್ರವೀಣ ಕುರಣಿ (25) ಎಂದು ತಿಳಿದು ಬಂದಿದೆ.

ಪ್ರವೀಣ ಕುರಣಿ ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿಯಾಗಿದ್ದು, ಈ ಘಟನೆ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ. ವರನ ಹಠಾತ್ ನಿಧನ ಎರಡೂ ಕುಟುಂಬಗಳಿಗೆ ಆಘಾತ ತಂದಿದೆ. ಹೌದು, ಇಡೀ ನಂದೀಕೇಶ್ವರ ಕಲ್ಯಾಣ ಮಂಟಪದಲ್ಲಿ ಎರಡು ಕುಟುಂಬದವರು ಮದುವೆ ಸಂಭ್ರಮದಲ್ಲಿ ಬ್ಯುಸಿಯಾಗಿದ್ದರು. ಆದರೆ, ಈ ಸಂಭ್ರಮ ಬಹಳ ಕಾಲ ಉಳಿಯಲೇ ಇಲ್ಲ. ಹೊಸ ಜೀವನ ಆರಂಭಿಸೋ ಮೊದಲೇ ವರ ಬದುಕಿಗೆ ವಿದಾಯ ಹೇಳಿದ ಹೇಳಿದ್ದಾನೆ.

ತಾಳಿ ಕಟ್ಟಿ ಕೇವಲ 15 ನಿಮಿಷದಲ್ಲೇ ವರನಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಬೇಕು ಎನ್ನುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಜೀವ ಬಿಟ್ಟಿದ್ದಾನೆ. ಇನ್ನೂ ಬಾಳಿ ಬದುಕಬೇಕಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…

8 hours ago

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…

8 hours ago

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…

13 hours ago

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…

13 hours ago

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

1 day ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

1 day ago