ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ವಧುವಿಗೆ ವರ ತಾಳಿ ಕಟ್ಟಿದ ಕೇವಲ 15 ನಿಮಿಷಗಳಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ವರ ಪ್ರವೀಣ ಕುರಣಿ (25) ಎಂದು ತಿಳಿದು ಬಂದಿದೆ.
ಪ್ರವೀಣ ಕುರಣಿ ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿಯಾಗಿದ್ದು, ಈ ಘಟನೆ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ. ವರನ ಹಠಾತ್ ನಿಧನ ಎರಡೂ ಕುಟುಂಬಗಳಿಗೆ ಆಘಾತ ತಂದಿದೆ. ಹೌದು, ಇಡೀ ನಂದೀಕೇಶ್ವರ ಕಲ್ಯಾಣ ಮಂಟಪದಲ್ಲಿ ಎರಡು ಕುಟುಂಬದವರು ಮದುವೆ ಸಂಭ್ರಮದಲ್ಲಿ ಬ್ಯುಸಿಯಾಗಿದ್ದರು. ಆದರೆ, ಈ ಸಂಭ್ರಮ ಬಹಳ ಕಾಲ ಉಳಿಯಲೇ ಇಲ್ಲ. ಹೊಸ ಜೀವನ ಆರಂಭಿಸೋ ಮೊದಲೇ ವರ ಬದುಕಿಗೆ ವಿದಾಯ ಹೇಳಿದ ಹೇಳಿದ್ದಾನೆ.
ತಾಳಿ ಕಟ್ಟಿ ಕೇವಲ 15 ನಿಮಿಷದಲ್ಲೇ ವರನಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಬೇಕು ಎನ್ನುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಜೀವ ಬಿಟ್ಟಿದ್ದಾನೆ. ಇನ್ನೂ ಬಾಳಿ ಬದುಕಬೇಕಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…