ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿ ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ಮೇ. 17 ರಂದು ಸಂಜೆ ನಡೆದಿದೆ. ಏರೋಸ್ಪೇಸ್ನ ಉದ್ಯೋಗಿ ಆಕಾಂಕ್ಷಾ ಎಸ್. ನಾಯರ್(22) ಮೃತ ಯುವತಿ. 3ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ಮೃತ ಆಕಾಂಕ್ಷಾ ಪೋಷಕರಾದ ಸುರೇಂದ್ರ ಮತ್ತು ಸಿಂಧೂದೇವಿ ನಿನ್ನೆಯೇ ಪಂಜಾಬ್ಗೆ ತೆರಳಿದ್ದಾರೆ. ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಂಜಾಬ್ನ ಎಲ್.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದ ಆಕಾಂಕ್ಷಾ, 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಉದ್ಯೋಗಕ್ಕೆ ಜಪಾನ್ಗೆ ಹೋಗಲು ಪ್ಲ್ಯಾನ್ ಕೂಡ ನಡೆಸಿದ್ದರು. ಇದಕ್ಕಾಗಿ ನಿನ್ನೆ ಕಾಲೇಜಿಗೆ ತೆರಳಿ ಸರ್ಟಿಫಿಕೇಟ್ ಪಡೆದುಕೊಂಡು ಬಂದಿದ್ದರು. ಈ ವಿಚಾರವನ್ನು ಫೋನ್ ಮಾಡಿ ಆಕಾಂಕ್ಷಾ ತನ್ನ ಪೋಷಕರಿಗೂ ತಿಳಿಸಿದ್ದಾಳೆ.
ಇನ್ನು ಪಂಜಾಬ್ಗೆ ತೆರಳುತ್ತಿದ್ದಾಗ ಮೃತ ಆಕಾಂಕ್ಷಾ ಪೋಷಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಶಾಸಕ ಹರೀಶ್ ಪೂಂಜಾ ಸಾಂತ್ವನ ಹೇಳಿದ್ದಾರೆ. ಈ ವೇಳೆ ‘ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಇದು ಕೊಲೆ ಆಗಿರಬಹುದು’ ಎಂದು ಆಕಾಂಕ್ಷಾ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಜರ್ಮನ್ಗೆ ಹೋಗಿ ಎರಡು ವರ್ಷ ಕೋರ್ಸ್ ಮಾಡುವ ಆಸೆ ಇತ್ತು. ಅದಕ್ಕಾಗಿ ಸರ್ಟಿಫಿಕೇಟ್ ಒಂದು ಸಿಕ್ಕಿರಲಿಲ್ಲ. ಕಾಲೇಜಿನಲ್ಲಿ ಕೇಳಿದ್ದಕ್ಕೆ, ಕಳಿಸಲು ಆಗಲ್ಲ ಇಲ್ಲಿಗೆ ಬನ್ನಿ ಅಂತಾ ಹೇಳಿದ್ದರಂತೆ. ನಿನ್ನೆ ಪಂಜಾಬ್ಗೆ ಹೋಗಿ ಸ್ನೇಹಿತೆಯರ ರೂಮ್ನಲ್ಲಿ ಉಳಿದುಕೊಂಡಿದ್ದಾಳೆ ಎಂದಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಮೃತಳ ತಂದೆ, ಓರ್ವ ಸ್ನೇಹಿತ ಆಕೆಯನ್ನು ಕಾಲೇಜಿಗೆ ಡ್ರಾಪ್ ಮಾಡಿದ್ದಾನೆ. ಬೆಳಗ್ಗೆ 9.30ಕ್ಕೆ ಕಾಲೇಜಿಗೆ ಹೋಗಿದ್ದಾಳೆ. 11.30 ಕಾಲೇಜಿನಲ್ಲೇ ಇದ್ದೇನೆ ಅಂತಾ ಮೆಸೇಜ್ ಮಾಡಿದ್ದಾಳೆ. ಮಧ್ಯಾಹ್ನ ಕರೆ ಮಾಡಿದರೆ ರಿಸೀವ್ ಮಾಡಲಿಲ್ಲ. ಸಂಜೆ ಜಲಂದರ್ ಪೊಲೀಸ್ ಠಾಣೆಯಿಂದ ಕರೆ ಮಾಡಿ ನಿಮ್ಮ ಮಗಳು ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದಿದ್ದಾಳೆ ಎಂದರು. ಹೆಚ್ಚಿನ ಮಾಹಿತಿ ನೀಡುತ್ತಿಲ್ಲ. ಕೇಳಿದರೆ ನೀವು ಬನ್ನಿ ಎಂದು ಹೇಳುತ್ತಿದ್ದಾರೆ. ಸರ್ಟಿಫಿಕೇಟ್ ವಿಚಾರದಲ್ಲಿ ಕಾಲೇಜಿನವರಿಂದ ಏನೋ ತೊಂದರೆ ಆಗಿದೆ ಎನ್ನುವ ಅನುಮಾನವಿದೆ. ಈಗ ದೆಹಲಿ ಏರ್ಪೋರ್ಟ್ನಲ್ಲಿದ್ದೇವೆ. ಮಧ್ಯಾಹ್ನ 2.30ಕ್ಕೆ ಅಮೃತಸರ ವಿಮಾನವಿದೆ. ಸಂಜೆ ವೇಳೆಗೆ ಅಲ್ಲಿ ತಲುಪುತ್ತೇವೆ ಎಂದು ಹೇಳಿದ್ದಾರೆ.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…