ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಸರ್ವಪಕ್ಷಗಳ ನಿಯೋಗಕ್ಕೆ ಆಯ್ಕೆ

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ.

ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ. ಕ್ಯಾ. ಚೌಟ ಒಳಗೊಂಡಂತೆ ವಿಶ್ವ ವೇದಿಕೆಯ ಈ ನಿಯೋಗದಲ್ಲಿ ಕರ್ನಾಟಕದಿಂದ ಇಬ್ಬರು ಸಂಸದರು ಆಯ್ಕೆ ಆಗಿದ್ದಾರೆ. ಅದರಲ್ಲೂ ಕರಾವಳಿ ಕರ್ನಾಟಕದಿಂದ ಕ್ಯಾ. ಚೌಟ ಆಯ್ಕೆಯಾಗಿದ್ದಾರೆ. 59 ಸದಸ್ಯರ ತಂಡವನ್ನು ಒಟ್ಟು ಏಳು ನಿಯೋಗಗಳನ್ನಾಗಿ ಮಾಡಿ ವಿವಿಧ ದೇಶಗಳಿಗೆ ಕಳುಹಿಸಿಕೊಡಲಾಗುತ್ತಿದ್ದು, ಈ ಪೈಕಿ ಡಿಎಂಕೆಯ ಕನಿಮೊಳಿ ನೇತೃತ್ವದ ತಂಡದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿ ಐವರು ಸಂಸದರು ಮೂವರು ಅಧಿಕಾರಿಗಳು ಇರಲಿದ್ದು, ಇವರು ಗ್ರೀಸ್ , ರಷ್ಯಾ, ಸ್ಪೇನ್, ಸ್ಲೊವೇನಿಯ್ ಹಾಗೂ ಲಾಟ್ವಿಯ ದೇಶಗಳಿಗೆ ಭೇಟಿ ನೀಡಲಿದ್ದಾರೆ.

ಕ್ಯಾ. ಚೌಟ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು “ಭಯೋತ್ಪಾನೆ ವಿರುದ್ದ ಹಾಗೂ ಪಾಕಿಸ್ತಾನ ಮೇಲಿನ ಅಪರೇಷನ್ ಸಿಂದೂರ್ ಬಗ್ಗೆ ಜಗತ್ತಿಗೆ ವಾಸ್ತವ ವಿಚಾರವನ್ನು ತಿಳಿಸುವ ಸರ್ವ ಪಕ್ಷದ ನಿಯೋಗದಲ್ಲಿ ಕ್ಯಾ. ಚೌಟ ಸ್ಥಾನ ಪಡೆದಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಅತ್ಯಂತ ಖುಷಿಯ ಹಾಗೂ ಹೆಮ್ಮೆಯ ವಿಚಾರ. ಸೇನೆಯಲ್ಲಿದ್ದು ದೇಶ ಸೇವೆ ಮಾಡಿರುವ ಕ್ಯಾ. ಚೌಟ ಅವರ ಆಯ್ಕೆ ಅತ್ಯಂತ ಔಚಿತ್ಯಪೂರ್ಣವಾಗಿದೆ. ಏಕೆಂದರೆ ನಮ್ಮ ದೇಶದ ಸೇನಾಪಡೆಯು ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯುವ ಮೂಲಕ ಭಾರತದ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!