ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ. ಕ್ಯಾ. ಚೌಟ ಒಳಗೊಂಡಂತೆ ವಿಶ್ವ ವೇದಿಕೆಯ ಈ ನಿಯೋಗದಲ್ಲಿ ಕರ್ನಾಟಕದಿಂದ ಇಬ್ಬರು ಸಂಸದರು ಆಯ್ಕೆ ಆಗಿದ್ದಾರೆ. ಅದರಲ್ಲೂ ಕರಾವಳಿ ಕರ್ನಾಟಕದಿಂದ ಕ್ಯಾ. ಚೌಟ ಆಯ್ಕೆಯಾಗಿದ್ದಾರೆ. 59 ಸದಸ್ಯರ ತಂಡವನ್ನು ಒಟ್ಟು ಏಳು ನಿಯೋಗಗಳನ್ನಾಗಿ ಮಾಡಿ ವಿವಿಧ ದೇಶಗಳಿಗೆ ಕಳುಹಿಸಿಕೊಡಲಾಗುತ್ತಿದ್ದು, ಈ ಪೈಕಿ ಡಿಎಂಕೆಯ ಕನಿಮೊಳಿ ನೇತೃತ್ವದ ತಂಡದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿ ಐವರು ಸಂಸದರು ಮೂವರು ಅಧಿಕಾರಿಗಳು ಇರಲಿದ್ದು, ಇವರು ಗ್ರೀಸ್ , ರಷ್ಯಾ, ಸ್ಪೇನ್, ಸ್ಲೊವೇನಿಯ್ ಹಾಗೂ ಲಾಟ್ವಿಯ ದೇಶಗಳಿಗೆ ಭೇಟಿ ನೀಡಲಿದ್ದಾರೆ.
ಕ್ಯಾ. ಚೌಟ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು “ಭಯೋತ್ಪಾನೆ ವಿರುದ್ದ ಹಾಗೂ ಪಾಕಿಸ್ತಾನ ಮೇಲಿನ ಅಪರೇಷನ್ ಸಿಂದೂರ್ ಬಗ್ಗೆ ಜಗತ್ತಿಗೆ ವಾಸ್ತವ ವಿಚಾರವನ್ನು ತಿಳಿಸುವ ಸರ್ವ ಪಕ್ಷದ ನಿಯೋಗದಲ್ಲಿ ಕ್ಯಾ. ಚೌಟ ಸ್ಥಾನ ಪಡೆದಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಅತ್ಯಂತ ಖುಷಿಯ ಹಾಗೂ ಹೆಮ್ಮೆಯ ವಿಚಾರ. ಸೇನೆಯಲ್ಲಿದ್ದು ದೇಶ ಸೇವೆ ಮಾಡಿರುವ ಕ್ಯಾ. ಚೌಟ ಅವರ ಆಯ್ಕೆ ಅತ್ಯಂತ ಔಚಿತ್ಯಪೂರ್ಣವಾಗಿದೆ. ಏಕೆಂದರೆ ನಮ್ಮ ದೇಶದ ಸೇನಾಪಡೆಯು ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯುವ ಮೂಲಕ ಭಾರತದ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದ್ರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…