ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ. ಕ್ಯಾ. ಚೌಟ ಒಳಗೊಂಡಂತೆ ವಿಶ್ವ ವೇದಿಕೆಯ ಈ ನಿಯೋಗದಲ್ಲಿ ಕರ್ನಾಟಕದಿಂದ ಇಬ್ಬರು ಸಂಸದರು ಆಯ್ಕೆ ಆಗಿದ್ದಾರೆ. ಅದರಲ್ಲೂ ಕರಾವಳಿ ಕರ್ನಾಟಕದಿಂದ ಕ್ಯಾ. ಚೌಟ ಆಯ್ಕೆಯಾಗಿದ್ದಾರೆ. 59 ಸದಸ್ಯರ ತಂಡವನ್ನು ಒಟ್ಟು ಏಳು ನಿಯೋಗಗಳನ್ನಾಗಿ ಮಾಡಿ ವಿವಿಧ ದೇಶಗಳಿಗೆ ಕಳುಹಿಸಿಕೊಡಲಾಗುತ್ತಿದ್ದು, ಈ ಪೈಕಿ ಡಿಎಂಕೆಯ ಕನಿಮೊಳಿ ನೇತೃತ್ವದ ತಂಡದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿ ಐವರು ಸಂಸದರು ಮೂವರು ಅಧಿಕಾರಿಗಳು ಇರಲಿದ್ದು, ಇವರು ಗ್ರೀಸ್ , ರಷ್ಯಾ, ಸ್ಪೇನ್, ಸ್ಲೊವೇನಿಯ್ ಹಾಗೂ ಲಾಟ್ವಿಯ ದೇಶಗಳಿಗೆ ಭೇಟಿ ನೀಡಲಿದ್ದಾರೆ.
ಕ್ಯಾ. ಚೌಟ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು “ಭಯೋತ್ಪಾನೆ ವಿರುದ್ದ ಹಾಗೂ ಪಾಕಿಸ್ತಾನ ಮೇಲಿನ ಅಪರೇಷನ್ ಸಿಂದೂರ್ ಬಗ್ಗೆ ಜಗತ್ತಿಗೆ ವಾಸ್ತವ ವಿಚಾರವನ್ನು ತಿಳಿಸುವ ಸರ್ವ ಪಕ್ಷದ ನಿಯೋಗದಲ್ಲಿ ಕ್ಯಾ. ಚೌಟ ಸ್ಥಾನ ಪಡೆದಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಅತ್ಯಂತ ಖುಷಿಯ ಹಾಗೂ ಹೆಮ್ಮೆಯ ವಿಚಾರ. ಸೇನೆಯಲ್ಲಿದ್ದು ದೇಶ ಸೇವೆ ಮಾಡಿರುವ ಕ್ಯಾ. ಚೌಟ ಅವರ ಆಯ್ಕೆ ಅತ್ಯಂತ ಔಚಿತ್ಯಪೂರ್ಣವಾಗಿದೆ. ಏಕೆಂದರೆ ನಮ್ಮ ದೇಶದ ಸೇನಾಪಡೆಯು ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯುವ ಮೂಲಕ ಭಾರತದ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದ್ರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…