ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಮುಖವನ್ನು ವಿಶ್ವವೇದಿಕೆಯಲ್ಲಿ ಬಹಿರಂಗಪಡಿಸಲು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸರ್ವ ಪಕ್ಷಗಳ ನಿಯೋಗಕ್ಕೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ಈ ನಿಯೋಗಕ್ಕೆ ಕ್ಯಾ. ಚೌಟ ಅವರು ನೇಮಕವಾಗಿರುವುದನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ. ಕ್ಯಾ. ಚೌಟ ಒಳಗೊಂಡಂತೆ ವಿಶ್ವ ವೇದಿಕೆಯ ಈ ನಿಯೋಗದಲ್ಲಿ ಕರ್ನಾಟಕದಿಂದ ಇಬ್ಬರು ಸಂಸದರು ಆಯ್ಕೆ ಆಗಿದ್ದಾರೆ. ಅದರಲ್ಲೂ ಕರಾವಳಿ ಕರ್ನಾಟಕದಿಂದ ಕ್ಯಾ. ಚೌಟ ಆಯ್ಕೆಯಾಗಿದ್ದಾರೆ. 59 ಸದಸ್ಯರ ತಂಡವನ್ನು ಒಟ್ಟು ಏಳು ನಿಯೋಗಗಳನ್ನಾಗಿ ಮಾಡಿ ವಿವಿಧ ದೇಶಗಳಿಗೆ ಕಳುಹಿಸಿಕೊಡಲಾಗುತ್ತಿದ್ದು, ಈ ಪೈಕಿ ಡಿಎಂಕೆಯ ಕನಿಮೊಳಿ ನೇತೃತ್ವದ ತಂಡದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿ ಐವರು ಸಂಸದರು ಮೂವರು ಅಧಿಕಾರಿಗಳು ಇರಲಿದ್ದು, ಇವರು ಗ್ರೀಸ್ , ರಷ್ಯಾ, ಸ್ಪೇನ್, ಸ್ಲೊವೇನಿಯ್ ಹಾಗೂ ಲಾಟ್ವಿಯ ದೇಶಗಳಿಗೆ ಭೇಟಿ ನೀಡಲಿದ್ದಾರೆ.
ಕ್ಯಾ. ಚೌಟ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು “ಭಯೋತ್ಪಾನೆ ವಿರುದ್ದ ಹಾಗೂ ಪಾಕಿಸ್ತಾನ ಮೇಲಿನ ಅಪರೇಷನ್ ಸಿಂದೂರ್ ಬಗ್ಗೆ ಜಗತ್ತಿಗೆ ವಾಸ್ತವ ವಿಚಾರವನ್ನು ತಿಳಿಸುವ ಸರ್ವ ಪಕ್ಷದ ನಿಯೋಗದಲ್ಲಿ ಕ್ಯಾ. ಚೌಟ ಸ್ಥಾನ ಪಡೆದಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಅತ್ಯಂತ ಖುಷಿಯ ಹಾಗೂ ಹೆಮ್ಮೆಯ ವಿಚಾರ. ಸೇನೆಯಲ್ಲಿದ್ದು ದೇಶ ಸೇವೆ ಮಾಡಿರುವ ಕ್ಯಾ. ಚೌಟ ಅವರ ಆಯ್ಕೆ ಅತ್ಯಂತ ಔಚಿತ್ಯಪೂರ್ಣವಾಗಿದೆ. ಏಕೆಂದರೆ ನಮ್ಮ ದೇಶದ ಸೇನಾಪಡೆಯು ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯುವ ಮೂಲಕ ಭಾರತದ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದ್ರು.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…