ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್ಐಆರ್ ದಾಖಲಾಗಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭ ಹಂತಕರ ಜೊತೆ ಮಾತಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ವ್ಯಾಪಕ ಅನುಮಾನ ವ್ಯಕ್ತವಾಗಿತ್ತು. ಈ ವೇಳೆ ಶ್ವೇತಾ ಪೂಜಾರಿ ಅವರು ಫೇಸ್ಬುಕ್ ಪೋಸ್ಟ್ ನಲ್ಲಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ರು. ಇದನ್ನೇ ಮುಂದಿಟ್ಟುಕೊAಡು ಕಾಂಗ್ರೆಸ್ ಸದಸ್ಯೆಯೋರ್ವರು ಪೊಲೀಸರಿಗೆ ದೂರು ನೀಡಿದ್ದು ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಶ್ವೇತಾ ಪೂಜಾರಿ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಇದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು ಹಿಂದುತ್ವದ ಪರ ಹೋರಾಟ ಮಾಡುವವರನ್ನು ದಮನಿಸುವ ಹೀನ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…