ಕರ್ನಾಟಕ ಕಾಂಗ್ರೆಸ್ ಸರಕಾರ ಮೇ 20ರಂದು 2ವರ್ಷಗಳ ಅಧಿಕಾರ ಅವಧಿ ಪೂರೈಸಿರುವ ಹಿನ್ನಲೆಯಲ್ಲಿ ಅಭಿವೃದ್ಧಿ ಹರ್ಷ ಕಾರ್ಯಕ್ರಮವನ್ನು ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಹೇಳಿದ್ದಾರೆ.
ಇವರು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾ ಕಛೇರಿಯಲ್ಲಿ ಮಾತನಾಡಿ, ಕಳೆದ 2 ವರ್ಷಗಳ ಅವಧಿಯಲ್ಲಿ ರಾಜ್ಯ ಸರಕಾರ ಜನರಿಗೆ ನೀಡಿರುವ ಮಾತಿನಂತೆ ಚುನಾವಣಾ ಪ್ರಣಾಳಿಕೆಯನ್ನು ಆಧರಿಸಿ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಜನರ ಬಾಳಿಗೆ ನೆಮ್ಮದಿಯನ್ನು ನೀಡಿದೆ. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಯನ್ನು ಜಾರಿಗೆ ತಂದಿದ್ದೇವೆ.ಇಲ್ಲಿನ ಯೋಜನೆಯು ಇಂದು ದೇಶಕ್ಕೆ ಸ್ಫೂರ್ತಿಯಾಗಿದೆ. ಕೊಟ್ಟ ಮಾತಿಗೆ ತಪ್ಪದೆ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸಿದ್ದೇವೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉದಯ್ ಆಚಾರ್ಯ, ಗಿರೀಶ್, ವಿಕಾಸ್, ಪದ್ಮ ಪ್ರಸಾದ್ ಜೈನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…