ಕರ್ನಾಟಕ ಕಾಂಗ್ರೆಸ್ ಸರಕಾರ ಮೇ 20ರಂದು 2ವರ್ಷಗಳ ಅಧಿಕಾರ ಅವಧಿ ಪೂರೈಸಿರುವ ಹಿನ್ನಲೆಯಲ್ಲಿ ಅಭಿವೃದ್ಧಿ ಹರ್ಷ ಕಾರ್ಯಕ್ರಮವನ್ನು ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಹೇಳಿದ್ದಾರೆ.
ಇವರು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾ ಕಛೇರಿಯಲ್ಲಿ ಮಾತನಾಡಿ, ಕಳೆದ 2 ವರ್ಷಗಳ ಅವಧಿಯಲ್ಲಿ ರಾಜ್ಯ ಸರಕಾರ ಜನರಿಗೆ ನೀಡಿರುವ ಮಾತಿನಂತೆ ಚುನಾವಣಾ ಪ್ರಣಾಳಿಕೆಯನ್ನು ಆಧರಿಸಿ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಜನರ ಬಾಳಿಗೆ ನೆಮ್ಮದಿಯನ್ನು ನೀಡಿದೆ. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಯನ್ನು ಜಾರಿಗೆ ತಂದಿದ್ದೇವೆ.ಇಲ್ಲಿನ ಯೋಜನೆಯು ಇಂದು ದೇಶಕ್ಕೆ ಸ್ಫೂರ್ತಿಯಾಗಿದೆ. ಕೊಟ್ಟ ಮಾತಿಗೆ ತಪ್ಪದೆ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸಿದ್ದೇವೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉದಯ್ ಆಚಾರ್ಯ, ಗಿರೀಶ್, ವಿಕಾಸ್, ಪದ್ಮ ಪ್ರಸಾದ್ ಜೈನ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…