ಮಂಗಳೂರು ಮತ್ತು ಬೆಂಗಳೂರು ನಡುವಿನ ರೈಲು ಪ್ರಯಾಣಿಕರಿಗೆ ಗಮನಾರ್ಹ ಬದಲಾವಣೆಯಾಗಿದೆ. 5 ತಿಂಗಳು ರೈಲುಗಳ ಸಂಚಾರ ಸಂಪೂರ್ಣ ರದ್ದಾಗಲಿದೆ. ಈ ಬಗ್ಗೆ ವರದಿ ಇಲ್ಲಿದೆ.
ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಮಾರ್ಗದಲ್ಲಿ ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣ, ಜೂನ್ 1 ರಿಂದ ನವೆಂಬರ್ 1, 2025ರವರೆಗೆ ಬೆಂಗಳೂರು-ಮಂಗಳೂರು ಮತ್ತು ಬೆಂಗಳೂರು-ಕಾರವಾರ ನಡುವಿನ ಆರು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ನೈರುತ್ಯ ರೈಲ್ವೆ ಇಲಾಖೆಯು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಯಾಣಿಕರು ಸಹಕರಿಸಬೇಕೆಂದು ಕೋರಿದೆ. ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು – ಬೆಂಗಳೂರು ಮಾರ್ಗದಲ್ಲಿ ರದ್ದಾಗುವ ರೈಲುಗಳು
ಮೇ 31 ರಿಂದ ನವೆಂಬರ್ 1 ರವರೆಗೆ ಶನಿವಾರಗಳಂದು ಸಂಚರಿಸುವ ಯಶವಂತಪುರ – ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದು.
ಜೂನ್ 1 ರಿಂದ ನವೆಂಬರ್ 2 ರವರೆಗೆ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ರದ್ದು.
ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದು.
ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ರದ್ದು.
ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ರದ್ದು.
ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರಗಳಂದು ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲು ರದ್ದು.
ಗೊಮ್ಮಟೇಶ್ವರ ಎಕ್ಸ್ಪ್ರೆಸ್, ಕಾರವಾರ ಎಕ್ಸ್ಪ್ರೆಸ್, ಮಂಗಳೂರು ಸೆಂಟ್ರಲ್ ವಾರದ ವಿಶೇಷ ಎಕ್ಸ್ಪ್ರೆಸ್ ಮುಂದಿನ 5ತಿಂಗಳು ರದ್ದಾಗಲಿವೆ. ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಸಂಚಾರ ನಡೆಸುವ 12 ರೈಲುಗಳ ಪೈಕಿ 6 ರೈಲುಗಳು ಸಂಪೂರ್ಣ ರದ್ದಾಗುತ್ತಿವೆ. ಈ ಮೂಲಕ ಪ್ರಯಾಣಿಕರು ಬದಲಿ ಮಾರ್ಗ ಆಯ್ದುಕೊಳ್ಳಬೇಕಾದ ಅನಿವಾರ್ಯತೆ ಇದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…