ಮಂಗಳೂರು ಮತ್ತು ಬೆಂಗಳೂರು ನಡುವಿನ ರೈಲು ಪ್ರಯಾಣಿಕರಿಗೆ ಗಮನಾರ್ಹ ಬದಲಾವಣೆಯಾಗಿದೆ. 5 ತಿಂಗಳು ರೈಲುಗಳ ಸಂಚಾರ ಸಂಪೂರ್ಣ ರದ್ದಾಗಲಿದೆ. ಈ ಬಗ್ಗೆ ವರದಿ ಇಲ್ಲಿದೆ.
ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಮಾರ್ಗದಲ್ಲಿ ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣ, ಜೂನ್ 1 ರಿಂದ ನವೆಂಬರ್ 1, 2025ರವರೆಗೆ ಬೆಂಗಳೂರು-ಮಂಗಳೂರು ಮತ್ತು ಬೆಂಗಳೂರು-ಕಾರವಾರ ನಡುವಿನ ಆರು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ನೈರುತ್ಯ ರೈಲ್ವೆ ಇಲಾಖೆಯು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಯಾಣಿಕರು ಸಹಕರಿಸಬೇಕೆಂದು ಕೋರಿದೆ. ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು – ಬೆಂಗಳೂರು ಮಾರ್ಗದಲ್ಲಿ ರದ್ದಾಗುವ ರೈಲುಗಳು
ಮೇ 31 ರಿಂದ ನವೆಂಬರ್ 1 ರವರೆಗೆ ಶನಿವಾರಗಳಂದು ಸಂಚರಿಸುವ ಯಶವಂತಪುರ – ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದು.
ಜೂನ್ 1 ರಿಂದ ನವೆಂಬರ್ 2 ರವರೆಗೆ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ರದ್ದು.
ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದು.
ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ರದ್ದು.
ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ರದ್ದು.
ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರಗಳಂದು ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲು ರದ್ದು.
ಗೊಮ್ಮಟೇಶ್ವರ ಎಕ್ಸ್ಪ್ರೆಸ್, ಕಾರವಾರ ಎಕ್ಸ್ಪ್ರೆಸ್, ಮಂಗಳೂರು ಸೆಂಟ್ರಲ್ ವಾರದ ವಿಶೇಷ ಎಕ್ಸ್ಪ್ರೆಸ್ ಮುಂದಿನ 5ತಿಂಗಳು ರದ್ದಾಗಲಿವೆ. ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಸಂಚಾರ ನಡೆಸುವ 12 ರೈಲುಗಳ ಪೈಕಿ 6 ರೈಲುಗಳು ಸಂಪೂರ್ಣ ರದ್ದಾಗುತ್ತಿವೆ. ಈ ಮೂಲಕ ಪ್ರಯಾಣಿಕರು ಬದಲಿ ಮಾರ್ಗ ಆಯ್ದುಕೊಳ್ಳಬೇಕಾದ ಅನಿವಾರ್ಯತೆ ಇದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…