ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಲ್ಪೆ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ

ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಜತೆಗೆ ಎಲ್ಲ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ.

ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ. ಈ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸೆಪ್ಟೆಂಬರ್ 15 ರವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಪ್ರತೀವರ್ಷ ಸ್ಥಗಿತಗೊಳಿಸಲಾಗುತ್ತದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈಗ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಈ ಸುಂದರ ದ್ವೀಪಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೋಟ್ ಹಾಗೂ ಜಲಸಾಹಸ ಕ್ರೀಡೆಗೆ ಕೆಲವು ದಿನಗಳ ಮಟ್ಟಿಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ. ನಿಯಮಗಳ ಪ್ರಕಾರ ಮೇ 16ರಿಂದ 4 ತಿಂಗಳು ನಿಷೇಧವಿರಲಿದೆ. ಸಮುದ್ರ ತೀರದಲ್ಲಿ ವಾತಾವರಣದ ಅನುಕೂಲ ಆಧರಿಸಿ ಜೂನ್ 1 ರ ವರೆಗೆ ನೀರಿಗಿಳಿಯಬಹುದು. ಬಳಿಕ ಬೀಚ್‌ನ ಉದ್ದಕ್ಕೂ ತಡೆಬೇಲಿ ಹಾಕಲಾಗುತ್ತದೆ. ಹಾಗಾಗಿ ದೂರದೂರುಗಳ ಪ್ರವಾಸಿಗರು ಇನ್ನು ಮಳೆಗಾಲದ ನಂತರವೇ ಇಲ್ಲಿಗೆ ಬರುವುದು ಉತ್ತಮ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!