ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಜತೆಗೆ ಎಲ್ಲ ಜಲಸಾಹಸ ಕ್ರೀಡೆಗಳನ್ನು ಅಲ್ಲಿಯವರೆಗೆ ಸ್ಥಗಿತಗೊಳಿಸಲಾಗಿದೆ.
ಮಳೆಗಾಲದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ದ್ವೀಪಕ್ಕೆ ತೆರಳುವುದು ಅಪಾಯಕಾರಿ. ಈ ಕಾರಣಕ್ಕಾಗಿ ಪ್ರತಿ ವರ್ಷ ಮೇ 15 ರಿಂದ ಸೆಪ್ಟೆಂಬರ್ 15 ರವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸುತ್ತದೆ. ಮಳೆಗಾಲದಲ್ಲಿ ಪಶ್ಚಿಮ ಕರಾವಳಿಯಲ್ಲಿ ಬೋಟ್ ಚಲಾಯಿಸಲು ಅನುಮತಿ ಇರುವುದಿಲ್ಲ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಪ್ರತೀವರ್ಷ ಸ್ಥಗಿತಗೊಳಿಸಲಾಗುತ್ತದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈಗ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಈ ಸುಂದರ ದ್ವೀಪಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೋಟ್ ಹಾಗೂ ಜಲಸಾಹಸ ಕ್ರೀಡೆಗೆ ಕೆಲವು ದಿನಗಳ ಮಟ್ಟಿಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ. ನಿಯಮಗಳ ಪ್ರಕಾರ ಮೇ 16ರಿಂದ 4 ತಿಂಗಳು ನಿಷೇಧವಿರಲಿದೆ. ಸಮುದ್ರ ತೀರದಲ್ಲಿ ವಾತಾವರಣದ ಅನುಕೂಲ ಆಧರಿಸಿ ಜೂನ್ 1 ರ ವರೆಗೆ ನೀರಿಗಿಳಿಯಬಹುದು. ಬಳಿಕ ಬೀಚ್ನ ಉದ್ದಕ್ಕೂ ತಡೆಬೇಲಿ ಹಾಕಲಾಗುತ್ತದೆ. ಹಾಗಾಗಿ ದೂರದೂರುಗಳ ಪ್ರವಾಸಿಗರು ಇನ್ನು ಮಳೆಗಾಲದ ನಂತರವೇ ಇಲ್ಲಿಗೆ ಬರುವುದು ಉತ್ತಮ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…