ಸೈನಿಕರ ಕ್ಷೇಮ, ದೇಶದ ಸುರಕ್ಷೆಗೆ ಪ್ರಾರ್ಥಿಸಿ ಉಡುಪಿ ಶ್ರೀ ಪೇಜಾವರ ಮಠಾಧೀಶರ ಮಾರ್ಗದರ್ಶನದಲ್ಲಿ ಸುದರ್ಶನ ಮಂತ್ರ ಯಾಗ ನಡೆಯಿತು.
ದೇಶದ ಗಡಿಭಾಗದಲ್ಲಿ ಶತ್ರುರಾಷ್ಟ್ರಗಳ ಸವಾಲುಗಳನ್ನೆದುರಿಸಿ ಯುದ್ಧ ಸನ್ನದ್ಧಸ್ಥಿತಿಯಲ್ಲಿ ದಿಟ್ಟತನದಿಂದ ದೇಶವನ್ನು ಕಾಯುತ್ತಾ ಸೈನಿಕರ ಯೋಗಕ್ಷೇಮ ಮತ್ತು ದೇಶದ ಸುರಕ್ಷೆ ಸಮೃದ್ಧಿಗಾಗಿ ಪ್ರಾರ್ಥಿಸಿ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಸಂಕಲ್ಪನಾನುಸಾರ ಈ ಯಾಗ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಪ್ರಾಚೀನ ಸ್ಕಂದಾಲಯ ಮುಚ್ಚುಕೋಡು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಹಾಸುದರ್ಶನ ಮಂತ್ರ ಯಾಗ ನೆರವೇರಿತು. ವಿದ್ವಾನ್ ಕುಕ್ಕಿಕಟ್ಟೆ ರಾಮಕೃಷ್ಣ ತಂತ್ರಿಗಳ ಮಾರ್ಗದರ್ಶನದಲ್ಲಿ ವಿದ್ವಾನ್ ಸಗ್ರಿ ಆನಂದತೀರ್ಥಾಚಾರ್ಯರು, ವಿದ್ವಾನ್ ಲಕ್ಷ್ಮೀನಾರಾಯಣ ತಂತ್ರಿ ಮತ್ತು ವಿದ್ವಾನ್ ಕೆ ಜೆ ಪವನಕುಮಾರರು ಯಾಗವನ್ನು ನೆರವೇರಿಸಿದ್ರು. ಪೂರ್ಣಾಹುತಿಯಲ್ಲಿ ಪಾಲ್ಗೊಂಡ ಶ್ರೀಗಳು ದೇವಸೇನಾಧಿಪತಿಯಾದ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಡೆಸಿದ ಈ ಯಾಗದ ಪೂರ್ಣ ಶ್ರೇಯಸ್ಸು ದೇಶದ ಗಡಿಕಾಯುವ ಸೈನಿಕರ ಶ್ರೇಯಸ್ಸಿಗಾಗಿ ದೇಶದ ಸುರಕ್ಷತೆಗಾಗಿ ಅರ್ಪಿಸೋಣ. ಯಾವುದೇ ಉದ್ವಿಗ್ನ ಪರಿಸ್ಥಿತಿಯಲ್ಲೂ ಎದೆಗುಂದದೇ ದೇಶಕ್ಕೆ ಜಯ ತಂದುಕೊAಡುವ ಅದ್ಭುತ ಶಕ್ತಿಯನ್ನು ಸೈನಿಕರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…