ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕೂಳೂರು ಸೇತುವೆ ; ನೀರಿನ ಹರಿವು ಹೆಚ್ಚಾದರೆ ಕಾಮಗಾರಿಗಾಗಿ ಹಾಕಲಾದ ಮಣ್ಣು ತೆರವು ಮಾಡಬೇಕಾಗಿ ಬರಬಹುದು

ಒಂದೆಡೆ ಮುಂಗಾರು ನಿರೀಕ್ಷೆಗೂ ಮೊದಲೇ ಈ ಮಾಸಾಂತ್ಯಕ್ಕೆ ಆಗಮಿಸುವ ಸಾಧ್ಯತೆ ಗೋಚರಿಸಿದೆ, ಹಾಗಾಗಿ ರಾಷ್ಟ್ರೀಯ ಹೆದ್ದಾರಿ 660 ಕೂಳೂರಿನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕೆಲಸ ಮತ್ತೆ ಮುಂದಕ್ಕೆ ಹೋಗುವ ಭೀತಿ ಎದುರಾಗಿದೆ.

ಕಾರಣ ಫಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿಗೆ ಗರ್ಡರ್ ಕೂರಿಸುವುದಕ್ಕಾಗಿ ಮಣ್ಣು ಹಾಕಲಾಗಿದೆ. ಒಂದು ವೇಳೆ ಮಳೆ ತೀವ್ರಗೊಂಡು ನದಿಯಲ್ಲಿ ನೀರು ಹೆಚ್ಚು ಹರಿದು ಬಂದರೆ ಈ ಮಣ್ಣನ್ನು ತೆರವುಗೊಳಿಸಬೇಕಾಗಿ ಬರಬಹುದು. ಸದ್ಯ ಹಳೆ ಸೇತುವೆಯ ಆರು ಸ್ಪಾನ್‌ಗಳ ಪೈಕಿ ನಾಲ್ಕರ ಭಾಗಕ್ಕೆ ಮಣ್ಣು ತುಂಬಲಾಗಿದೆ. ಉಳಿದ ಎರಡರ ಭಾಗದಲ್ಲಷ್ಟೇ ನೀರು ಹರಿದು ಹೋಗುತ್ತಿದೆ. ಬೇಸಿಗೆಯಾದ್ದರಿಂದ ಪ್ರಸ್ತುತ ಕೆಲಸ ಚುರುಕಾಗಿ ನಡೆಯುತ್ತಿದೆ.

ಕಳೆದ ನಾಲ್ಕು ವರ್ಷಗಳಿಂದ ಇಲ್ಲಿ ನದಿಗುಡ್ಡ ಮಣ್ಣು ಹಾಕುವುದು, ಮಳೆಗಾಲದಲ್ಲಿ ತೆರವು ಮಾಡುವುದು ನಡೆಯುತ್ತಲೇ ಇದೆ. ಈ ಬಾರಿಯಾದರೂ ಗರ್ಡರ್ ಕೂರಿಸುವ ಕೆಲಸ ನಡೆಸಬೇಕು ಎಂದು ಹಿಂದಿನ ಬಾರಿಯ ದಿಶಾ ಸಭೆಯಲ್ಲಿ ಸಂಸದರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದರು. ಮಳೆಗಾಲ ಬಂದಾಗ ಮಣ್ಣು ಬಿಡಿಸಿಕೊಡದೆ ಹೋದರೆ ಕೂಳೂರು, ಅತ್ರಬೈಲು, ತೋಕೂರು ಅಸುಪಾಸಿನಲ್ಲಿ ನೆರೆಯಾಗುವ ಸಂಭವದ ಬಗ್ಗೆ ಆ ಭಾಗದ ನಿವಾಸಿಗಳಿಂದಲೂ ಕಳವಳ ವ್ಯಕ್ತವಾಗುತ್ತಿದೆ. 1952ರಲ್ಲಿ ನಿರ್ಮಾಣಗೊಂಡಿದ್ದ ಕೂಳೂರು ಹಳಿ ಕಮಾನು ಸೇತುವೆ ದುರ್ಬಲವಾಗಿದೆ ಎಂದು 2019ರಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವರದಿ ನೀಡಿತ್ತು. ಆ ಬಳಿಕ 56 ಕೋ.ರೂ. ವೆಚ್ಚದಲ್ಲಿ ಹೊಸ 776 ಮೀ.ಉದ್ದದ 6 ಲೇನ್ ಸೇತುವೆಯ ರೂಪುರೇಷೆ ಹಾಕಲಾಗಿತ್ತು. 2021ರಲ್ಲಿ ಕೆಲಸ ಆರಂಭಗೊAಡಿದ್ದು, ಗುತ್ತಿಗೆದಾರರ ಹಣಕಾಸು ಸಮಸ್ಯೆಯಿಂದ ಕೆಲಸ ಸ್ಥಗಿತಗೊಂಡಿತು. 2023ರಲ್ಲಿ ಮತ್ತೆ ಕಾಮಗಾರಿ ಆರಂಭಗೊAಡಿದ್ದು ಕೆಲಸ ನಿಧಾನವಾಗಿ ನಡೆಯುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!