ಒಂದೆಡೆ ಮುಂಗಾರು ನಿರೀಕ್ಷೆಗೂ ಮೊದಲೇ ಈ ಮಾಸಾಂತ್ಯಕ್ಕೆ ಆಗಮಿಸುವ ಸಾಧ್ಯತೆ ಗೋಚರಿಸಿದೆ, ಹಾಗಾಗಿ ರಾಷ್ಟ್ರೀಯ ಹೆದ್ದಾರಿ 660 ಕೂಳೂರಿನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕೆಲಸ ಮತ್ತೆ ಮುಂದಕ್ಕೆ ಹೋಗುವ ಭೀತಿ ಎದುರಾಗಿದೆ.
ಕಾರಣ ಫಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿಗೆ ಗರ್ಡರ್ ಕೂರಿಸುವುದಕ್ಕಾಗಿ ಮಣ್ಣು ಹಾಕಲಾಗಿದೆ. ಒಂದು ವೇಳೆ ಮಳೆ ತೀವ್ರಗೊಂಡು ನದಿಯಲ್ಲಿ ನೀರು ಹೆಚ್ಚು ಹರಿದು ಬಂದರೆ ಈ ಮಣ್ಣನ್ನು ತೆರವುಗೊಳಿಸಬೇಕಾಗಿ ಬರಬಹುದು. ಸದ್ಯ ಹಳೆ ಸೇತುವೆಯ ಆರು ಸ್ಪಾನ್ಗಳ ಪೈಕಿ ನಾಲ್ಕರ ಭಾಗಕ್ಕೆ ಮಣ್ಣು ತುಂಬಲಾಗಿದೆ. ಉಳಿದ ಎರಡರ ಭಾಗದಲ್ಲಷ್ಟೇ ನೀರು ಹರಿದು ಹೋಗುತ್ತಿದೆ. ಬೇಸಿಗೆಯಾದ್ದರಿಂದ ಪ್ರಸ್ತುತ ಕೆಲಸ ಚುರುಕಾಗಿ ನಡೆಯುತ್ತಿದೆ.
ಕಳೆದ ನಾಲ್ಕು ವರ್ಷಗಳಿಂದ ಇಲ್ಲಿ ನದಿಗುಡ್ಡ ಮಣ್ಣು ಹಾಕುವುದು, ಮಳೆಗಾಲದಲ್ಲಿ ತೆರವು ಮಾಡುವುದು ನಡೆಯುತ್ತಲೇ ಇದೆ. ಈ ಬಾರಿಯಾದರೂ ಗರ್ಡರ್ ಕೂರಿಸುವ ಕೆಲಸ ನಡೆಸಬೇಕು ಎಂದು ಹಿಂದಿನ ಬಾರಿಯ ದಿಶಾ ಸಭೆಯಲ್ಲಿ ಸಂಸದರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದರು. ಮಳೆಗಾಲ ಬಂದಾಗ ಮಣ್ಣು ಬಿಡಿಸಿಕೊಡದೆ ಹೋದರೆ ಕೂಳೂರು, ಅತ್ರಬೈಲು, ತೋಕೂರು ಅಸುಪಾಸಿನಲ್ಲಿ ನೆರೆಯಾಗುವ ಸಂಭವದ ಬಗ್ಗೆ ಆ ಭಾಗದ ನಿವಾಸಿಗಳಿಂದಲೂ ಕಳವಳ ವ್ಯಕ್ತವಾಗುತ್ತಿದೆ. 1952ರಲ್ಲಿ ನಿರ್ಮಾಣಗೊಂಡಿದ್ದ ಕೂಳೂರು ಹಳಿ ಕಮಾನು ಸೇತುವೆ ದುರ್ಬಲವಾಗಿದೆ ಎಂದು 2019ರಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವರದಿ ನೀಡಿತ್ತು. ಆ ಬಳಿಕ 56 ಕೋ.ರೂ. ವೆಚ್ಚದಲ್ಲಿ ಹೊಸ 776 ಮೀ.ಉದ್ದದ 6 ಲೇನ್ ಸೇತುವೆಯ ರೂಪುರೇಷೆ ಹಾಕಲಾಗಿತ್ತು. 2021ರಲ್ಲಿ ಕೆಲಸ ಆರಂಭಗೊAಡಿದ್ದು, ಗುತ್ತಿಗೆದಾರರ ಹಣಕಾಸು ಸಮಸ್ಯೆಯಿಂದ ಕೆಲಸ ಸ್ಥಗಿತಗೊಂಡಿತು. 2023ರಲ್ಲಿ ಮತ್ತೆ ಕಾಮಗಾರಿ ಆರಂಭಗೊAಡಿದ್ದು ಕೆಲಸ ನಿಧಾನವಾಗಿ ನಡೆಯುತ್ತಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…