ಒಂದೆಡೆ ಮುಂಗಾರು ನಿರೀಕ್ಷೆಗೂ ಮೊದಲೇ ಈ ಮಾಸಾಂತ್ಯಕ್ಕೆ ಆಗಮಿಸುವ ಸಾಧ್ಯತೆ ಗೋಚರಿಸಿದೆ, ಹಾಗಾಗಿ ರಾಷ್ಟ್ರೀಯ ಹೆದ್ದಾರಿ 660 ಕೂಳೂರಿನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕೆಲಸ ಮತ್ತೆ ಮುಂದಕ್ಕೆ ಹೋಗುವ ಭೀತಿ ಎದುರಾಗಿದೆ.
ಕಾರಣ ಫಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿಗೆ ಗರ್ಡರ್ ಕೂರಿಸುವುದಕ್ಕಾಗಿ ಮಣ್ಣು ಹಾಕಲಾಗಿದೆ. ಒಂದು ವೇಳೆ ಮಳೆ ತೀವ್ರಗೊಂಡು ನದಿಯಲ್ಲಿ ನೀರು ಹೆಚ್ಚು ಹರಿದು ಬಂದರೆ ಈ ಮಣ್ಣನ್ನು ತೆರವುಗೊಳಿಸಬೇಕಾಗಿ ಬರಬಹುದು. ಸದ್ಯ ಹಳೆ ಸೇತುವೆಯ ಆರು ಸ್ಪಾನ್ಗಳ ಪೈಕಿ ನಾಲ್ಕರ ಭಾಗಕ್ಕೆ ಮಣ್ಣು ತುಂಬಲಾಗಿದೆ. ಉಳಿದ ಎರಡರ ಭಾಗದಲ್ಲಷ್ಟೇ ನೀರು ಹರಿದು ಹೋಗುತ್ತಿದೆ. ಬೇಸಿಗೆಯಾದ್ದರಿಂದ ಪ್ರಸ್ತುತ ಕೆಲಸ ಚುರುಕಾಗಿ ನಡೆಯುತ್ತಿದೆ.
ಕಳೆದ ನಾಲ್ಕು ವರ್ಷಗಳಿಂದ ಇಲ್ಲಿ ನದಿಗುಡ್ಡ ಮಣ್ಣು ಹಾಕುವುದು, ಮಳೆಗಾಲದಲ್ಲಿ ತೆರವು ಮಾಡುವುದು ನಡೆಯುತ್ತಲೇ ಇದೆ. ಈ ಬಾರಿಯಾದರೂ ಗರ್ಡರ್ ಕೂರಿಸುವ ಕೆಲಸ ನಡೆಸಬೇಕು ಎಂದು ಹಿಂದಿನ ಬಾರಿಯ ದಿಶಾ ಸಭೆಯಲ್ಲಿ ಸಂಸದರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದರು. ಮಳೆಗಾಲ ಬಂದಾಗ ಮಣ್ಣು ಬಿಡಿಸಿಕೊಡದೆ ಹೋದರೆ ಕೂಳೂರು, ಅತ್ರಬೈಲು, ತೋಕೂರು ಅಸುಪಾಸಿನಲ್ಲಿ ನೆರೆಯಾಗುವ ಸಂಭವದ ಬಗ್ಗೆ ಆ ಭಾಗದ ನಿವಾಸಿಗಳಿಂದಲೂ ಕಳವಳ ವ್ಯಕ್ತವಾಗುತ್ತಿದೆ. 1952ರಲ್ಲಿ ನಿರ್ಮಾಣಗೊಂಡಿದ್ದ ಕೂಳೂರು ಹಳಿ ಕಮಾನು ಸೇತುವೆ ದುರ್ಬಲವಾಗಿದೆ ಎಂದು 2019ರಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವರದಿ ನೀಡಿತ್ತು. ಆ ಬಳಿಕ 56 ಕೋ.ರೂ. ವೆಚ್ಚದಲ್ಲಿ ಹೊಸ 776 ಮೀ.ಉದ್ದದ 6 ಲೇನ್ ಸೇತುವೆಯ ರೂಪುರೇಷೆ ಹಾಕಲಾಗಿತ್ತು. 2021ರಲ್ಲಿ ಕೆಲಸ ಆರಂಭಗೊAಡಿದ್ದು, ಗುತ್ತಿಗೆದಾರರ ಹಣಕಾಸು ಸಮಸ್ಯೆಯಿಂದ ಕೆಲಸ ಸ್ಥಗಿತಗೊಂಡಿತು. 2023ರಲ್ಲಿ ಮತ್ತೆ ಕಾಮಗಾರಿ ಆರಂಭಗೊAಡಿದ್ದು ಕೆಲಸ ನಿಧಾನವಾಗಿ ನಡೆಯುತ್ತಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…