ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುವ ಏಜೆನ್ಸಿ ವಿರುದ್ದ ಕಠಿಣವಾದ ಕ್ರಮವನ್ನು ಪೊಲೀಸ್ ಆಯುಕ್ತರು ಕೈಗೊಳ್ಳಬೇಕೆಂದು ಸಂತ್ರಸ್ತರ ಪರ ಹೋರಾಟಗಾರ ಲಾರೆನ್ಸ್ ಡಿ’ಸೋಜ ಹೇಳಿದ್ದಾರೆ.
ಇವರು ವುಡ್ ಲ್ಯಾಂಡ್ಸ್ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಉಡುಪಿ, ಕೇರಳ, ಆಂಧ್ರ ಮುಂತಾದ ಕಡೆಗಳಲ್ಲಿ ಇವರ ಏಜೆನ್ಸಿಗಳು ಕಾರ್ಯಾಚರಣೆ ಮಾಡ್ತಾ ಇದೆ. 300 ಕ್ಕೂ ಅಧಿಕ ಸಂಖ್ಯೆಯ ಜನರಿಗೆ ಕೆಲಸ ಕೊಡುವುದಾಗಿ ಮೊಸ ಮಾಡಿ ಸಂತ್ರಸ್ತರಿAದ 9 ಕೋಟಿಗೂ ಅಧಿಕ ಮೊತ್ತದ ಹಣವನ್ನು ಆನ್ಲೈನ್ ಮೂಲಕ, ಏಜೆನ್ಸಿಯ ಬ್ಯಾಂಕ್ ಖಾತೆ ಮತ್ತು ಕ್ಯೂ ಆರ್ ಕೋಡ್ ಮೂಲಕ ಹಣ ಜಮೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈಗ್ರೋ ಏಜೆನ್ಸಿ ಅಕ್ರಮವಾಗಿ ಕಾರ್ಯಾಚರಣೆ ನಡೆಸಿದೆ ಎಂದು ಕೆಲವಿಚಾರಗಳನ್ನ ಪ್ರಸ್ತಾಪಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತರಾದ ಲಿಖಿತ್, ಸಾಧಿಕ್, ವರ್ಷಿತ್, ವಿಲ್ಟನ್, ಪ್ರದೀಪ್ ಮುಂತಾದವರು ಉಪಸ್ಥಿತರಿದ್ರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…