ಮಂಗಳೂರಿನ ಬಜ್ಪೆ ಭಟ್ರಕೆರೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಿಕ್ಷಾ ನಿಲ್ದಾಣವನ್ನು ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರು ಉದ್ಘಾಟಿಸಿ ಮಾತನಾಡಿದರು.
ರಿಕ್ಷಾ ಚಾಲಕರು ಜವಾಬ್ದಾರಿಯಿಂದ ರಿಕ್ಷಾ ಚಾಲನೆ ಮಾಡುವುದರ ಜೊತೆಗೆ ಸರಕಾರದಿಂದ ಸಿಗುವ ಪ್ರಯೋಜಗಳನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾರವರು ರಾಜ್ಯ ಮೋಟಾರ್ ವಾಹನಕ್ಕೆ ಸಂಬAಧಪಟ್ಟ ಅಸಂಘಟಿತ ಕಾರ್ಮಿಕರಿಗೆ ಸರಕಾರ ಈಗಾಗಲೇ ಅನೇಕ ಯೋಜನೆಗಳನ್ನು ತಂದಿದ್ದು, ಅದನ್ನು ನೋಂದಾವಣೆ ಮಾಡುವ ಮೂಲಕ ತಮ್ಮ ಕುಟುಂಬದ ರಕ್ಷಣೆಗೆ ಮುಂದಾಗಬೇಕೆAದು ಕರೆ ನೀಡಿದರು. ರಿಕ್ಷಾ ಚಾಲನೆ ವೃತ್ತಿ ಇಂದು ಗೌರವಯುತ ವೃತ್ತಿಯಾಗಿದ್ದು, ಸರಕಾರದಿಂದ ಯಾವ ಸವಲತ್ತು ಬಯಸದೇ ತಮ್ಮ ದುಡಿಮೆಯ ಮೂಲಕ ಸರಕಾರಕ್ಕೆ ಮತ್ತು ಸಮಾಜಕ್ಕೆ ಉತ್ತಮವಾದ ಕೊಡುಗೆ ನೀಡುವಂತಹ ರಿಕ್ಷಾ ಚಾಲಕರಿಗೆ ಗೌರವ ಸಿಗುವ ರೀತಿ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ರಿಕ್ಷಾ ಚಾಲಕರಿಗೆ ಮೇಲ್ಛಾವಣಿ ಘಟಕವನ್ನು ಒದಗಿಸಿಕೊಡಬೇಕೆಂಬ ವಿಚಾರವನ್ನು ವಿಧಾನ ಪರಿಷತ್ನಲ್ಲಿ ಚರ್ಚೆಗೆ ತಂದು ಇಡೀ ರಾಜ್ಯಾದಾದ್ಯಂತ ಇವತ್ತು ರಿಕ್ಷಾಚಾಲಕರಿಗೂ ಸರಕಾರದ ಅನುದಾನದಿಂದ ಮೇಲ್ಛಾವಣಿ ಘಟಕವನ್ನು ಹಾಕುವಂತಹ ಅವಕಾಶ ಲಭಿಸಿದಂತಾಗಿದೆ. ಇದೊಂದು ಒಳ್ಳೆಯ ಬೆಳವಣಿಗೆ ಎಂದು ಐವನ್ ಡಿ’ಸೋಜಾರವರು ಈ ಸಂಧರ್ಭದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಬಜ್ಪೆ ಗ್ರಾಮ ಪಂಚಾಯತ್ ಪಿ.ಡಿ.ಒ. ರಮೇಶ್, ಅಧ್ಯಕ್ಷರಾದ ಜಾಹೀರ್ ಹುಸೈನ್, ಕಾಂಗ್ರೆಸ್ ನಾಯಕರಾದ ಸಿರಾಜ್ ಬಜ್ಪೆ, ನಿಸಾರ್ ಕರಾವಳಿ, ಬಜ್ಪೆ ರೋಬಾರ್ಟ್ ಕ್ಯಾಸ್ತಲಿನೋ, ಪಂಚಾಯತ್ ಸದಸ್ಯರಾದ ಸರೋಜಿನಿ, ಸಾದಿಕ್ , ಸಂದೇಶ್ ಭಟ್ರಕೆರೆ, ಮಜೀದ್, ಮೌಲನಾ ಶಬೀರ್, ಎಸ್. ಸುಹೈಲ್ ಭಟ್ರಕೆರೆ ಮುಂತಾದವರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…