ಪವಿತ್ರ ಹಜ್ ಯಾತ್ರೆಗೆ ಹೊರಡಲಿರುವ ಸ್ಪೀಕರ್ ಯು.ಟಿ.ಖಾದರ್ ಅವರನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ನಗರದ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.
ಬಳಿಕ ಮಾತನಾಡಿದ ಅವರು, ನಾನು ಯಾವ ಸ್ಥಾನಮಾನವನ್ನೂ ಆಶಿಸಿದವನಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು, ಮಂತ್ರಿಯಾಗಲು ಯಾರದೇ ಶಿಫಾರಸು ಮಾಡಿಸಿದವನಲ್ಲ. ನಿಮ್ಮೆಲ್ಲರ ದುಆ, ಆಶೀರ್ವಾದವೇ ನನ್ನನ್ನು ಈ ಹಂತಕ್ಕೆ ತಲುಪಿಸಿದೆ. ನನ್ನ ಈವರೆಗಿನ ಬದುಕು ನೆಮ್ಮದಿಯಿಂದ ಕೂಡಿದೆ. ನಾಡಿನ, ಸಮುದಾಯದ ಹಿತಕ್ಕಾಗಿ ನಾನು ಅಲ್ಲಿ ಪ್ರಾರ್ಥಿಸುವೆ. ಈ ಸಾರ್ವಜನಿಕ ರಂಗದಲ್ಲಿ, ನಿಮ್ಮೊಂದಿಗಿನ ನನ್ನ ಒಡನಾಟದಲ್ಲಿ ಏನಾದರು ತಪ್ಪಾಗಿದ್ದರೆ, ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿರಿ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಹಜ್ ಯಾತ್ರೆಗೈಯಲಿರುವ ದಿ ನ್ಯಾಷನಲ್ ಕಮಿಷನ್ ಫಾರ್ ಅಲ್ಲೈಡ್ ಆ್ಯಂಡ್ ಹೆಲ್ತ್ಕೇರ್ ಕರ್ನಾಟಕ ರಾಜ್ಯಾಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಕೂಡ ಬೀಳ್ಗೊಡಲಾಯಿತು. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದ್ರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…