ಪವಿತ್ರ ಹಜ್ ಯಾತ್ರೆಗೆ ಹೊರಡಲಿರುವ ಸ್ಪೀಕರ್ ಯು.ಟಿ.ಖಾದರ್ ಅವರನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ನಗರದ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.
ಬಳಿಕ ಮಾತನಾಡಿದ ಅವರು, ನಾನು ಯಾವ ಸ್ಥಾನಮಾನವನ್ನೂ ಆಶಿಸಿದವನಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು, ಮಂತ್ರಿಯಾಗಲು ಯಾರದೇ ಶಿಫಾರಸು ಮಾಡಿಸಿದವನಲ್ಲ. ನಿಮ್ಮೆಲ್ಲರ ದುಆ, ಆಶೀರ್ವಾದವೇ ನನ್ನನ್ನು ಈ ಹಂತಕ್ಕೆ ತಲುಪಿಸಿದೆ. ನನ್ನ ಈವರೆಗಿನ ಬದುಕು ನೆಮ್ಮದಿಯಿಂದ ಕೂಡಿದೆ. ನಾಡಿನ, ಸಮುದಾಯದ ಹಿತಕ್ಕಾಗಿ ನಾನು ಅಲ್ಲಿ ಪ್ರಾರ್ಥಿಸುವೆ. ಈ ಸಾರ್ವಜನಿಕ ರಂಗದಲ್ಲಿ, ನಿಮ್ಮೊಂದಿಗಿನ ನನ್ನ ಒಡನಾಟದಲ್ಲಿ ಏನಾದರು ತಪ್ಪಾಗಿದ್ದರೆ, ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿರಿ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಹಜ್ ಯಾತ್ರೆಗೈಯಲಿರುವ ದಿ ನ್ಯಾಷನಲ್ ಕಮಿಷನ್ ಫಾರ್ ಅಲ್ಲೈಡ್ ಆ್ಯಂಡ್ ಹೆಲ್ತ್ಕೇರ್ ಕರ್ನಾಟಕ ರಾಜ್ಯಾಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಕೂಡ ಬೀಳ್ಗೊಡಲಾಯಿತು. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದ್ರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…