ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮುಲ್ಕಿ ತಾಲೂಕು ಶಾಖೆಯ ಶರ್ಲಿ ಸುಮಾಲಿನಿ ಮಾತನಾಡಿ ಕಳೆದ ನಾಲ್ಕು ವರ್ಷಗಳಲ್ಲಿ ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಉತ್ತಮ ಸಾಧನೆಯಲ್ಲಿ ಮುನ್ನಡೆಯುತ್ತಿದ್ದು ,ಸೊಸೈಟಿಯಲ್ಲಿ ಸವಲತ್ತುಗಳನ್ನು ಸದುಪಯೋಗಪಡೆದುಕೊಂಡು ಅಭಿವೃದ್ಧಿಗೆ ಮಹಿಳೆ ಹಾಗೂ ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಮತ್ತು ಸೇವಾ ಸಂಸ್ಥೆಗಳು ಕೈಜೋಡಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಎಚ್ ವಸಂತ್ ಬರ್ನಾಡ್ ವಹಿಸಿ ಮಾತನಾಡಿ ಸೊಸೈಟಿ ಮಹಿಳೆಯರ ಸ್ವಾವಲಂಬನೆಗೆ ಹೊತ್ತು ನೀಡುತ್ತಿದ್ದು ಕಳೆದ ವರ್ಷದಲ್ಲಿ 42 ಲಕ್ಷ ಲಾಭದಲ್ಲಿ ಮುನ್ನಡೆಯುತ್ತಿದೆ. ಇದಕ್ಕೆ ಗ್ರಾಹಕರ ಸಹಕಾರ ಕಾರಣವಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಕಾರದ ಅಗತ್ಯವಿದೆ ಎಂದರು. ವೇದಿಕೆಯಲ್ಲಿ ಕೆಮ್ರಾಲ್ ಪಕ್ಷಿಕೆರೆ ಮಹಿಳಾ ವಿವಿದ್ದೋದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹಿನಿ ಬಿ ರಾವ್, ಸೊಸೈಟಿ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಡಾ. ಗಣೇಶ್ ಅಮೀನ್ ಸಂಕಮಾರ್, ಉಮಾನಾಥ ಜೆ ಶೆಟ್ಟಿಗಾರ್, ಗಣೇಶ್ ಪ್ರಸಾದ್ ದೇವಾಡಿಗ, ಮಿರ್ಜಾ ಅಹ್ಮದ್, ಹರೀಶ್ ಪುತ್ರನ್, ವಿಜಯ ಕುಮಾರ್ ಸನಿಲ್, ಜಯಕೃಷ್ಣ ಕೋಟ್ಯಾನ್, ತನುಜಾ ಶೆಟ್ಟಿ, ನವೀನ್ ಸಾಲ್ಯಾನ್ ಪಂಜ, ಸಂದೀಪ್ ಕುಮಾರ್, ಗೌತಮ್ ಜೈನ್ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು, ಶಾಖಾ ಪ್ರಬಂಧಕಿ ಅಕ್ಷತಾ ಶೆಟ್ಟಿ ನಿರೂಪಿಸಿದರು. ಸಿಬ್ಬಂದಿ ನಿರಂಜಲ ನೀತು ಪ್ರಾರ್ಥಿಸಿದರು,ಲಾವಣ್ಯ ಧನ್ಯವಾದ ಅರ್ಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…