ಮಂಗಳೂರು ಜೈಲಲ್ಲಿ ಹೊಡೆದಾಟ ನಡೆದ ಘಟನೆ ನಡೆದಿದೆ.
ಜಿಲ್ಲಾ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿರುವ ಕೆಲವು ವಿಚಾರಣಾಧೀನ ಕೈದಿಗಳು ತನ್ನ ಕಚೇರಿಯ ಮುಂಭಾಗ ನಿಂತು ಬಿ ಬ್ಯಾರಕ್ನಲ್ಲಿರುವ ಕೆಲವು ವಿಚಾರಣಾ ಕೈದಿಗಳನ್ನು ಗುರಾಯಿಸಿ ನೋಡಿದರು ಎಂಬ ಕಾರಣಕ್ಕೆ ಪರಸ್ಪರ ಅವಾಚ್ಯ ಶಬ್ದದಿಂದ ಬೈದಾಡಿಕೊಂಡಿದ್ದಾರೆ. ಅಲ್ಲದೆ ಸಿಮೆಂಟ್ ಬ್ಲಾಕ್ಗಳನ್ನು ಹೊಡೆದು ಅದರ ತುಂಡುಗಳನ್ನು ಎಸೆದಿದ್ದಾರೆ. ಬಿ ಬ್ಯಾರಕ್ನ ಮಧ್ಯದ್ವಾರದ ಗೇಟನ್ನು ದೂಡಿ ಹೊರಬಂದು ಕಚೇರಿಯ ಕೋಣೆಗೆ ನುಗ್ಗಿ ಬಾಗಿಲಿನ ಗ್ಲಾಸನ್ನು ಕೈಯಿಂದ ಹೊಡೆದು ಹಾನಿ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ಒಬ್ಬ ಕೈದಿಯ ಕಾಲಿಗೆ ಗಾಯವಾಗಿದೆ ಎಂದು ಕಾರಾಗೃಹದ ಅಧೀಕ್ಷಕರು ನೀಡಿದ ದೂರಿನಂತೆ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…