ಉಳ್ಳಾಲ: ವೈದ್ಯಕೀಯ ಎಂಬ ಪವಿತ್ರ ವೃತ್ತಿಗೆ ಕಾಲಿಟ್ಟಾಗ, ದಯೆ, ನಿಷ್ಠೆ ಮತ್ತು ಜೀವನಪೂರ್ತಿ ಕಲಿಯುವ ಮನೋಭಾವನೆ ನಿಮ್ಮ ಮಾರ್ಗದರ್ಶಕ ತತ್ವಗಳಾಗಲಿ. ಮಾನವತೆಗೆ ಸೇವೆ ಸಲ್ಲಿಸುವಲ್ಲಿ ಮತ್ತು ಆರೋಗ್ಯ ವಲಯವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ನಿಮ್ಮ ಪ್ರಯಾಣ ಸಾಧನಾಪೂರ್ಣವಾಗಲಿ. ಯೆನೆಪೊಯ ಮೆಡಿಕಲ್ ಕಾಲೇಜಿನ 21ನೇ ಪದವಿ ಪ್ರದಾನ ದಿನಾಚರಣೆಯಲ್ಲಿ ಭಾಗವಹಿಸುವುದು ಮತ್ತು ನಿಮ್ಮ ಜೀವನದ ಹೊಸ ಅಧ್ಯಾಯದ ಆರಂಭವನ್ನು ಸಾಕ್ಷಿಯಾಗುವುದು ನನಗೆ ಅತ್ಯಂತ ಗೌರವದ ವಿಷಯವಾಗಿದೆ ಎಂದು ವಿಶಾಖಪಟ್ಟಣದ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಉಮೇಶ್ ಮಹಾಂತ್ ಶೆಟ್ಟಿ ಅಭಿಪ್ರಾಯಪಟ್ಟರು.
ದೇರಳಕಟ್ಟೆಯ ಯೆನೆಪೊಯ ವೈದ್ಯಕೀಯ ಕಾಲೇಜು (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ), ಇದರ ಯೆಂಡ್ಯುರನ್ಸ್ ಝೋನ್ನಲ್ಲಿ ಜರಗಿದ 21ನೇ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಪ್ರಧಾನ ನೆರವೇರಿಸಿ ಮಾತನಾಡಿದರು.
ಕರ್ನಾಟಕ ವೈದ್ಯಕೀಯ ಮಂಡಳಿಯ ಅಧ್ಯಕ್ಷ, ಬಳ್ಳಾರಿ ಪೃಥ್ವಿ ಮಕ್ಕಳ ಆಸ್ಪತ್ರೆಯ ತಜ್ಞವೈದ್ಯ ಡಾ.ಯೋಗಾನಂದ ರೆಡ್ಡಿ ವೈ.ಸಿ ಮುಖ್ಯ ಅತಿಥಿಯಾಗಿ ಮಾತನಾಡಿ ಆಧುನಿಕ ವೈದ್ಯಕೀಯದಲ್ಲಿ ಮಾನವೀಯತೆ ಮತ್ತು ವೈಜ್ಞಾನಿಕ ಚಿಂತನೆಯ ಮಹತ್ವವನ್ನು ಅರಿಯಬೇಕಿದೆ ಎಂದರು.
ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ. ಎಂ. ಎಸ್. ಮೂಸಬ್ಬ ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ಅಧೀಕ್ಷಕ ಡಾ. ಹಬೀಬ್ ರಹಮಾನ್ ಪದವೀಧರರಿಗೆ ಪ್ರಮಾಣ ವಚನ ಬೋಧಿಸಿದರು. ಡೀನ್ ಡಾ. ಅಭಯ ನಿರ್ಗುಡೆ ಉಪಸ್ಥಿತರಿದ್ದರು.
ಡಾ. ಪ್ರಕಾಶ್ ಸಲ್ದಾನ್ಹ ವಂದಿಸಿದರು. ಬಳಿಕ ವಿದ್ಯಾರ್ಥಿಗಳ ನೃತ್ಯ, ಸಂಗೀತ, ನಾಟಕ ಮತ್ತು ಇತರ ಪ್ರತಿಭೆಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ನ್ಯಾಕ್ ವತಿಯಿಂದ ಎ+ ಗ್ರೇಡ್ ಹೊಂದಿರುವ ಹಾಗೂ 2024ರ ಎನ್ಐಆರ್ಎಫ್ ರ್ಯಾಂಕಿAಗ್ನಲ್ಲಿ 95ನೇ ಸ್ಥಾನದಲ್ಲಿರುವ ಯೆನೆಪೊಯ ಮೆಡಿಕಲ್ ಕಾಲೇಜು, ಉತ್ತಮ ವೈದ್ಯಕೀಯ ಶಿಕ್ಷಣ ಮತ್ತು ಸಮಗ್ರ ವಿದ್ಯಾರ್ಥಿ ಅಭಿವೃದ್ಧಿಯಲ್ಲಿ ತನ್ನ ಮಟ್ಟಮೇಲಿನ ಕಾರ್ಯಕ್ಷಮತೆಯನ್ನು ಮುಂದುವರೆಸುತ್ತಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…