ಪುತ್ತೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತರಾದ ಪಾಂಬಾರು ಪ್ರದೀಪ್ ರೈ ಅವರ ಮೇಲೆ ಇಬ್ಬರು ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಬೊಳುವಾರು ಆಸ್ಪತ್ರೆ ಬಳಿ ಪ್ರದೀಪ್ ರೈ ಕಾರು ನಿಲ್ಲಿಸುತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ನಂತರ ಹಲ್ಲೆ ನಡೆಸಿ ಪರಾರಿಯಾಗಿದೆ. ಪ್ರದೀಪ್ ರೈ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಹಲ್ಲೆಯಿಂದಾಗಿ ಗಾಯಗೊಂಡಿರುವ ಪ್ರದೀಪ್ ರೈ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರದೀಪ್ ರೈ ಅವರು ಕೊಡಗು ಜಿಲ್ಲೆಯ ಸೋಮವಾರಪೇಟೆ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…