ಇತರೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿ ಸಂಸ್ಥೆಯ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ.

ಇತ್ತೀಚೆಗೆ ನಡೆದ ದ. ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿಯ ವಿಜೇತ ಅಭ್ಯರ್ಥಿಗಳನ್ನು ಮಂಗಳೂರು ಮಹಾನಗರ ಜಿಲ್ಲೆ ಮತ್ತು ಸಹಕಾರ ಭಾರತಿ ದ ಕ ಜಿಲ್ಲೆಯ ವತಿಯಿಂದ ತಾರೀಕು ಮೇ 19ರಂದು ಕ್ಯಾಂಪ್ಕೊ ಸಭಾ ಭವನದಲ್ಲಿ ಅಭಿನಂದಿಸಲಾಯಿತು.

ಹಿರಿಯ ಸಹಕಾರಿ, ಸಹಕಾರ ಭಾರತಿ ರಾಷ್ಟ್ರೀಯ ಮಾಜಿ ಉಪಾಧ್ಯಕ್ಷ ಮತ್ತು ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಶ್ರೀ ಪದ್ಮನಾಭ ಕೊಂಕೋಡಿಯವರು ತಮ್ಮ ಅಭಿನಂದನಾ ಭಾಷಣದಲ್ಲಿ ಎಲ್ಲಾ ಅಭ್ಯರ್ಥಿಗಳನ್ನು ಹಾಗೂ ಚುನಾವಣೆಯಲ್ಲಿ ಶ್ರಮವಹಿಸಿದ ಕಾರ್ಯಕರ್ತರನ್ನು ಪ್ರಶಂಸಿಸಿದರು. ಕರ್ನಾಟಕದಲ್ಲಿ ಸಹಕಾರ ಭಾರತಿ ಬೆಳೆದು ಬಂದ ವಿವರ, ಈ ಪಥದಲ್ಲಿ ಏಳು ಬೀಳುಗಳು, ಸಾಧನೆ, ಅತ್ತು ಅದರ ಹಿಂದಿನ ಪರಿಶ್ರಮ ಎಲ್ಲವೂ ಸೇರಿ ಒಟ್ಟಾರೆ ಸಂಘಟನೆಯ ಬೆಳವಣಿಗೆಯೇ ಒಂದು ಪಾಠ ಮತ್ತು ಸಂಘಟನೆಯು ವ್ಯಕ್ತಿಯ ಯಶಸ್ಸಿಗೆ ಉತ್ತಮ ಅನುಭವದ ಸಾರವಾಗಲಿದೆ ಎಂದರು. ನಿರ್ದೇಶಕರಾಗಿ ಆಯ್ಕೆಯಾದವರು, ಗೊ ಸಾಕಾಣೆದಾರರ ಸಂಕಷ್ಟ, ಮತ್ತು ಅಹವಾಲುಗಳಿಗೆ ತುರ್ತು ಸ್ಪಂದಿಸುವ ಅವಶ್ಯಕತೆ ಇದೆ ಎಂದು ಒತ್ತಿ ಹೇಳಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಹಕಾರ ಭಾರತಿಯ ಮಾಜಿ ಸಂಘಟನಾ ಕಾರ್ಯದರ್ಶಿ ಶ್ರೀ ಸೂರ್ಯಕಾಂತ್ ಕೇಳ್ಕಾರ್ ರವರು ಸಂಘಟನೆ ಬೆಳೆಯುವ ದೃಷ್ಟಿಯಿಂದ ಕೆಲವು ಬಾರಿ ತನ್ನ ಸ್ವಹಿತವನ್ನು ಬದಿಗಿಡುವ ಸಂದರ್ಭ ಬಂದಾಗಲೂ ಸದಸ್ಯರುಗಳು ಸಂಘಟನೆಯ ಬಗ್ಗೆ ಆಸಕ್ತಿ ಕಳೆದು ಕೊಳ್ಳಬಾರದು ಎಂದರು. ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಒಕ್ಕೂಟದ ನಿಕಟ ಪೂರ್ವ ನಿರ್ದೇಶಕ ಶ್ರೀ ನರಸಿಂಹ ಕಾಮತ್ ಅವರು ಮಾತನಾಡಿ ಸಹಕಾರ ಭಾರತಿ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ರೀತಿಯಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ, ಮೂಲಕ ಜವಾಬ್ದಾರಿ ನಿರ್ವಹಿಸುವ ಕುರಿತು ಹೇಳಿದರು. ವಿಭಾಗ ಸಂಘಟನಾ ಪ್ರಮುಖ್ ಶ್ರೀ ಮೋಹನ್ ಕುಂಬ್ಲೇಕರ್ ತನ್ನ ಅಭಿಪ್ರಾಯ ಮಂಡಿಸಿದರು. ಇದೇ ಸಂದರ್ಭದಲ್ಲಿ ಸಹಕಾರ ಭಾರತಿ ದ ಕ ಜಿಲ್ಲಾ ಅಧ್ಯಕ್ಷ ಹಾಗೂ ಒಕ್ಕೂಟ ನಿರ್ದೇಶಕರಲ್ಲಿ ಒಬ್ಬರಾದ ಶ್ರೀ ಸುಧಾಕರ ರೈಯವರು, ದ.ಕ ಹಾಲು ಒಕ್ಕೂಟದ ಚುನಾವಣಾ ಸಂದರ್ಭ ಸಹಕಾರ ಮತ್ತು ಮಾರ್ಗದರ್ಶನ ನೀಡಿದ ಸಂಘ ಹಾಗೂ ಸಹಕಾರ ಭಾರತಿಯ ವರಿಷ್ಠರು ಮತ್ತು ಭಾರತೀಯ ಜನತಾ ಪಕ್ಷದ ಜನ ಪ್ರತಿನಿಧಿಗಳು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಹಾಲು ಒಕ್ಕೂಟದ ಚುನಾವಣಾ ಅಭ್ಯರ್ಥಿ ಹಾಗೂ ನಿಕಟ ಪೂರ್ವ ನಿರ್ದೇಶಕಿ, ಸಹಕಾರ ಭಾರತಿ ದ ಕ ಜಿಲ್ಲಾ ಮಹಿಳಾ ಪ್ರಮುಖ್ ಶ್ರೀಮತಿ ಸುಭದ್ರಾ ರಾವ್ ಅವರು ತನ್ನ ಅನುಭವ ಹಂಚಿಕೊAಡು, ವೈಯಕ್ತಿಕ ಸೋಲು ಗೆಲುವುಗಳನ್ನು ಸಮಾನ ಮನಸ್ಕರಾಗಿ ಸ್ವೀಕರಿಸುವಂತೆ ಕರೆ ನೀಡಿದರು. ಸಂಘಟನೆಯನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳುವ ಕುರಿತು ಹೇಳಿದರು.ಮಂಗಳೂರು ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಜಿ ಆರ್ ಪ್ರಸಾದ್ ರವರು ಸ್ವಾಗತಿಸಿ ಪ್ರಸ್ತಾವನೆಗೈದರು. ಶ್ರೀ ದಯಾನಂದ ಅಡ್ಯಾರ್ ಅವರು ವಂದಿಸಿದರು . ಶ್ರೀಮತಿ ಜಯಶ್ರೀ ಯವರು ಕಾರ್ಯಕ್ರಮ ನಿರ್ವಹಿಸಿದರು. ದ ಕ ಜಿಲ್ಲೆಯ ಮತ್ತು ನಗರ ಜಿಲ್ಲಾ ಪದಾಧಿಕಾರಿಗಳು ಕಾರ್ಯಕರ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

5 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

5 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

6 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

1 day ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

1 day ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

1 day ago