ಜನ ಮನದ ನಾಡಿ ಮಿಡಿತ

Advertisement

ಉತ್ತರ ಭಾರತದಲ್ಲಿ ಪ್ರವಾಹ: ಜಿಲ್ಲೆಯ ಯಾತ್ರಿಕರು ಸೇಫ್

ದಕ್ಷಿಣ ಕನ್ನಡ: ಉತ್ತರ ಭಾರತಕ್ಕೆ ತೆರಳಿ ಪ್ರವಾಹದಲ್ಲಿ ಸಿಲುಕಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಕೇರಳ ಮತ್ತು ತಮಿಳುನಾಡಿನ ಒಂದು ಅಥವಾ ಇಬ್ಬರು ಸೇರಿದಂತೆ ಜಿಲ್ಲೆಯ ಸುಮಾರು 92 ಯಾತ್ರಾರ್ಥಿಗಳು ಪವಿತ್ರ ಸ್ಥಳಗಳ ದರ್ಶನಕ್ಕಾಗಿ ಉತ್ತರ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು. ಜುಲೈ 19 ರಂದು ಗುಜರಾತ್‌ನ ಶ್ರೀ ಸೋಮನಾಥ ದೇವಸ್ಥಾನದ ದರ್ಶನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳು ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು. ಗುಜರಾತಿನಲ್ಲಿ ಕಳೆದ 15 ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದ್ದು, ವೆರಾವಲ್ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿ ರಸ್ತೆಗಳು ಜಲಾವೃತವಾಗಿವೆ. ಸೋಮನಾಥ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಪ್ರವಾಹದ ನೀರಿನಲ್ಲಿ ಎಲ್ಲರೂ ಸಿಕ್ಕಿ ಹಾಕಿಕೊಂಡಿದ್ದಾರೆ. ಬಳಿಕ ಸ್ಥಳೀಯ ಜಿಲ್ಲಾಡಳಿತ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬೆಳಗ್ಗೆ 10 ಗಂಟೆಗೆ ವೆರಾವಲ್ ನಿಲ್ದಾಣದಿಂದ ಮತ್ತೊಂದು ಕ್ಷೇತ್ರಕ್ಕೆ ದರ್ಶನ ಪಡೆದು ರೈಲಿಗೆ ತೆರಳಬೇಕಿತ್ತು. ಆದರೆ, ರೈಲು ಹಳಿಗಳು ಜಲಾವೃತಗೊಂಡಿರುವುದರಿಂದ ರಾತ್ರಿಯೇ ರೈಲು ಹೊರಡಲಿದೆ. ಹೀಗಾಗಿ ಜಿಲ್ಲೆಯ ಜನರು ಸುರಕ್ಷಿತವಾಗಿ ರೈಲು ನಿಲ್ದಾಣದಲ್ಲಿ ತಂಗಿದ್ದಾರೆ ಎಂದು ಯಾತ್ರಾರ್ಥಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!