ಜನ ಮನದ ನಾಡಿ ಮಿಡಿತ

Advertisement

ಉತ್ತರ ಭಾರತದಲ್ಲಿ ಪ್ರವಾಹ: ಜಿಲ್ಲೆಯ ಯಾತ್ರಿಕರು ಸೇಫ್

ದಕ್ಷಿಣ ಕನ್ನಡ: ಉತ್ತರ ಭಾರತಕ್ಕೆ ತೆರಳಿ ಪ್ರವಾಹದಲ್ಲಿ ಸಿಲುಕಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಕೇರಳ ಮತ್ತು ತಮಿಳುನಾಡಿನ ಒಂದು ಅಥವಾ ಇಬ್ಬರು ಸೇರಿದಂತೆ ಜಿಲ್ಲೆಯ ಸುಮಾರು 92 ಯಾತ್ರಾರ್ಥಿಗಳು ಪವಿತ್ರ ಸ್ಥಳಗಳ ದರ್ಶನಕ್ಕಾಗಿ ಉತ್ತರ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು. ಜುಲೈ 19 ರಂದು ಗುಜರಾತ್‌ನ ಶ್ರೀ ಸೋಮನಾಥ ದೇವಸ್ಥಾನದ ದರ್ಶನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳು ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು. ಗುಜರಾತಿನಲ್ಲಿ ಕಳೆದ 15 ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದ್ದು, ವೆರಾವಲ್ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿ ರಸ್ತೆಗಳು ಜಲಾವೃತವಾಗಿವೆ. ಸೋಮನಾಥ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಪ್ರವಾಹದ ನೀರಿನಲ್ಲಿ ಎಲ್ಲರೂ ಸಿಕ್ಕಿ ಹಾಕಿಕೊಂಡಿದ್ದಾರೆ. ಬಳಿಕ ಸ್ಥಳೀಯ ಜಿಲ್ಲಾಡಳಿತ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬೆಳಗ್ಗೆ 10 ಗಂಟೆಗೆ ವೆರಾವಲ್ ನಿಲ್ದಾಣದಿಂದ ಮತ್ತೊಂದು ಕ್ಷೇತ್ರಕ್ಕೆ ದರ್ಶನ ಪಡೆದು ರೈಲಿಗೆ ತೆರಳಬೇಕಿತ್ತು. ಆದರೆ, ರೈಲು ಹಳಿಗಳು ಜಲಾವೃತಗೊಂಡಿರುವುದರಿಂದ ರಾತ್ರಿಯೇ ರೈಲು ಹೊರಡಲಿದೆ. ಹೀಗಾಗಿ ಜಿಲ್ಲೆಯ ಜನರು ಸುರಕ್ಷಿತವಾಗಿ ರೈಲು ನಿಲ್ದಾಣದಲ್ಲಿ ತಂಗಿದ್ದಾರೆ ಎಂದು ಯಾತ್ರಾರ್ಥಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!