ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ 4 ಕುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ವಿಧಾನಸೌಧ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಈ ಹಸ್ತಾಂತರ ಕಾರ್ಯಕ್ರಮ ನಡೆದಿದೆ. ಡಿಸಿಎಂ ಪವನ್ ಕಲ್ಯಾಣ್ ಅವರು ಆನೆಗಳ ಹಸ್ತಾಂತರಿಸುವ ದಾಖಲೆಯನ್ನು ಸ್ವೀಕಾರ ಮಾಡಿದ್ದಾರೆ.
ವಿಧಾನಸೌಧ ಮುಂಭಾಗ ಜ್ಯೂನಿಯರ್ ಅಭಿಮನ್ಯು, ರಂಜನ್, ಕೃಷ್ಣ, ದೇವ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಯುದ್ಧಕ್ಕೆ ಹೋಗುವ ಸೈನಿಕರಂತೆ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ ಈ 4 ಕುುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ಮಹೇಂದ್ರ ಆನೆ ಕುಮ್ಕಿ ಆನೆಗಳ ಬೆಂಬಲಕ್ಕೆ ಬಂದಿದ್ದು, ಆಂಧ್ರಪ್ರದೇಶಕ್ಕೆ ಕಳಿಸಿದ ಬಳಿಕ ವಾಪಸ್ ಆಗಲಿದೆ.
ಆಂಧ್ರಪ್ರದೇಶಕ್ಕೆ ರಾಜ್ಯದ ಕುಮ್ಮಿ ಆನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭೈರತಿ ಸುರೇಶ್, ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸೇರಿದಂತೆ ಆಂಧ್ರಪ್ರದೇಶದ ಹಿರಿಯ ಅಧಿಕಾರಿಗಳು ಸಹ ಹಾಜರಿದ್ದರು.
ರಾಜ್ಯದ ಆನೆಗಳನ್ನು ನೆರೆಯ ರಾಜ್ಯಕ್ಕೆ ಕಳುಹಿಸಲು ಪ್ರಮುಖವಾದ ಕಾರಣ ಅರಣ್ಯ ಭಾಗದಲ್ಲಿ ಕಾಡು ಪ್ರಾಣಿಗಳು ಹಾಗೂ ಮಾನವನ ಸಂಘರ್ಷ ತಪ್ಪಿಸುವುದಾಗಿದೆ .
ಪ್ರಾಣಿಗಳನ್ನು ಹಿಡಿಯಲು ಈ ಕುಮ್ಮಿ ಆನೆಗಳನ್ನು ಬಳಕೆ ಮಾಡಲಾಗುತ್ತದೆ. ದುಬಾರೆ ಸೇರಿದಂತೆ ಬೇರೆ ಬೇರೆ ಕಡೆ ಈ ಆನೆಗಳಿಗೆ ತರಬೇತಿ ನೀಡಲಾಗಿದೆ. ಮಾನವ-ಕಾಡು ಪ್ರಾಣಿಗಳ ಸಂಘರ್ಷ ತಪ್ಪಿಸಲು ಪಳಗಿಸಿದ ಕುಮ್ಮಿ ಆನೆಗಳನ್ನೇ ಆಂಧ್ರಕ್ಕೆ ಹಸ್ತಾಂತರ ಮಾಡಲಾಗಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…