ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಧಾರಕಾರ ಮಳೆ ಸುರಿಯುತ್ತಿದ್ರೂ ನೇತ್ರಾವತಿ ನದಿಯಲ್ಲಿ ಹರಿಯುವ ನೀರಿನ ಮಟ್ಟದಲ್ಲಿ ವ್ಯತ್ಯಾಸವಿಲ್ಲ

ಮಳೆಗಾಲ ಆರಂಭಕ್ಕೂ ಮುನ್ನ ಇದೀಗ ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಜಡಿಮಳೆಗೆ ಬಂಟ್ವಾಳ ತಾಲೂಕಿನ ಅನೇಕ ಕಡೆಗಳಲ್ಲಿ ಪಾಕೃತಿಕ ವಿಕೋಪಗಳು ಉಂಟಾಗಿದೆ.

ಆದರೆ ನೇತ್ರಾವತಿ ನದಿಯಲ್ಲಿ ಹರಿಯುವ ನೀರಿನ ಮಟ್ಟದಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬರದೆ ಯಥಾಸ್ಥಿತಿಯಲ್ಲಿ ಶಾಂತವಾಗಿಹರಿಯುತ್ತಿದೆ ಎಂದು ತಾಲೂಕು ಆಡಳಿತ ಅಧಿಕೃತ ಮಾಹಿತಿ ನೀಡಿದೆ. ನೇತ್ರಾವತಿ ನದಿಯಲ್ಲಿ ತಿಳಿ ನೀರು ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಅತಿಯಾದ ಗಾಳಿ ಮಳೆಯಾದರೆ ನೇತ್ರಾವತಿ ನೀರಿನ ಮಟ್ಟ ಹೆಚ್ಚಾಗುತ್ತದೆ. ಮತ್ತು ಕೆಸರು ಮಿಶ್ರಿತ ನೀರು ತುಂಬಿ ಹರಿಯುತ್ತದೆ.

ಆದರೆ ನೇತ್ರಾವತಿ ನದಿಯಲ್ಲಿ ಮಳೆ ನೀರು, ಕಡಲ ಒಡಲು ಸೇರುವ ಮುನ್ನ ವಾಣಿಜ್ಯ ಮತ್ತು ಕುಡಿಯುವ ನೀರಿನ ಉದ್ದೇಶದಿಂದ ಅಲ್ಲಲ್ಲಿ ಅಡ್ಡಲಾಗಿ ಕಟ್ಟಲಾದ ಡ್ಯಾಂ ಗಳ ಹೊಟ್ಟೆ ತುಂಬಬೇಕು. ಅ ಬಳಿಕವಷ್ಟೇ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುತ್ತದೆ. ಹಾಗಾಗಿ ಆರಂಭದ ಮಳೆಯ ಕೆಸರು ನೀರು ಹೆಚ್ಚು ಎಂದರೆ ಬಂಟ್ವಾಳ ತಾಲೂಕಿನ ಶಂಭೂರು ಡ್ಯಾಂ ವರೆಗೆ ಬರಬಹುದು, ಅಲ್ಲಿಂದ ಕೆಳಗೆ ಉಕ್ಕಿ ಹರಿಯಬೇಕಾದರೆ ಇನ್ನೂ ಕೆಲದಿನಗಳು ಬೇಕಾಗಬಹುದು ಎಂಬುದು ವಾಸ್ತವ ಸತ್ಯವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!