ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಧಾರಕಾರ ಮಳೆ ಸುರಿಯುತ್ತಿದ್ರೂ ನೇತ್ರಾವತಿ ನದಿಯಲ್ಲಿ ಹರಿಯುವ ನೀರಿನ ಮಟ್ಟದಲ್ಲಿ ವ್ಯತ್ಯಾಸವಿಲ್ಲ

ಮಳೆಗಾಲ ಆರಂಭಕ್ಕೂ ಮುನ್ನ ಇದೀಗ ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಜಡಿಮಳೆಗೆ ಬಂಟ್ವಾಳ ತಾಲೂಕಿನ ಅನೇಕ ಕಡೆಗಳಲ್ಲಿ ಪಾಕೃತಿಕ ವಿಕೋಪಗಳು ಉಂಟಾಗಿದೆ.

ಆದರೆ ನೇತ್ರಾವತಿ ನದಿಯಲ್ಲಿ ಹರಿಯುವ ನೀರಿನ ಮಟ್ಟದಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬರದೆ ಯಥಾಸ್ಥಿತಿಯಲ್ಲಿ ಶಾಂತವಾಗಿಹರಿಯುತ್ತಿದೆ ಎಂದು ತಾಲೂಕು ಆಡಳಿತ ಅಧಿಕೃತ ಮಾಹಿತಿ ನೀಡಿದೆ. ನೇತ್ರಾವತಿ ನದಿಯಲ್ಲಿ ತಿಳಿ ನೀರು ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಅತಿಯಾದ ಗಾಳಿ ಮಳೆಯಾದರೆ ನೇತ್ರಾವತಿ ನೀರಿನ ಮಟ್ಟ ಹೆಚ್ಚಾಗುತ್ತದೆ. ಮತ್ತು ಕೆಸರು ಮಿಶ್ರಿತ ನೀರು ತುಂಬಿ ಹರಿಯುತ್ತದೆ.

ಆದರೆ ನೇತ್ರಾವತಿ ನದಿಯಲ್ಲಿ ಮಳೆ ನೀರು, ಕಡಲ ಒಡಲು ಸೇರುವ ಮುನ್ನ ವಾಣಿಜ್ಯ ಮತ್ತು ಕುಡಿಯುವ ನೀರಿನ ಉದ್ದೇಶದಿಂದ ಅಲ್ಲಲ್ಲಿ ಅಡ್ಡಲಾಗಿ ಕಟ್ಟಲಾದ ಡ್ಯಾಂ ಗಳ ಹೊಟ್ಟೆ ತುಂಬಬೇಕು. ಅ ಬಳಿಕವಷ್ಟೇ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುತ್ತದೆ. ಹಾಗಾಗಿ ಆರಂಭದ ಮಳೆಯ ಕೆಸರು ನೀರು ಹೆಚ್ಚು ಎಂದರೆ ಬಂಟ್ವಾಳ ತಾಲೂಕಿನ ಶಂಭೂರು ಡ್ಯಾಂ ವರೆಗೆ ಬರಬಹುದು, ಅಲ್ಲಿಂದ ಕೆಳಗೆ ಉಕ್ಕಿ ಹರಿಯಬೇಕಾದರೆ ಇನ್ನೂ ಕೆಲದಿನಗಳು ಬೇಕಾಗಬಹುದು ಎಂಬುದು ವಾಸ್ತವ ಸತ್ಯವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!