ಮಳೆಗಾಲ ಆರಂಭಕ್ಕೂ ಮುನ್ನ ಇದೀಗ ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಜಡಿಮಳೆಗೆ ಬಂಟ್ವಾಳ ತಾಲೂಕಿನ ಅನೇಕ ಕಡೆಗಳಲ್ಲಿ ಪಾಕೃತಿಕ ವಿಕೋಪಗಳು ಉಂಟಾಗಿದೆ.
ಆದರೆ ನೇತ್ರಾವತಿ ನದಿಯಲ್ಲಿ ಹರಿಯುವ ನೀರಿನ ಮಟ್ಟದಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬರದೆ ಯಥಾಸ್ಥಿತಿಯಲ್ಲಿ ಶಾಂತವಾಗಿಹರಿಯುತ್ತಿದೆ ಎಂದು ತಾಲೂಕು ಆಡಳಿತ ಅಧಿಕೃತ ಮಾಹಿತಿ ನೀಡಿದೆ. ನೇತ್ರಾವತಿ ನದಿಯಲ್ಲಿ ತಿಳಿ ನೀರು ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಅತಿಯಾದ ಗಾಳಿ ಮಳೆಯಾದರೆ ನೇತ್ರಾವತಿ ನೀರಿನ ಮಟ್ಟ ಹೆಚ್ಚಾಗುತ್ತದೆ. ಮತ್ತು ಕೆಸರು ಮಿಶ್ರಿತ ನೀರು ತುಂಬಿ ಹರಿಯುತ್ತದೆ.
ಆದರೆ ನೇತ್ರಾವತಿ ನದಿಯಲ್ಲಿ ಮಳೆ ನೀರು, ಕಡಲ ಒಡಲು ಸೇರುವ ಮುನ್ನ ವಾಣಿಜ್ಯ ಮತ್ತು ಕುಡಿಯುವ ನೀರಿನ ಉದ್ದೇಶದಿಂದ ಅಲ್ಲಲ್ಲಿ ಅಡ್ಡಲಾಗಿ ಕಟ್ಟಲಾದ ಡ್ಯಾಂ ಗಳ ಹೊಟ್ಟೆ ತುಂಬಬೇಕು. ಅ ಬಳಿಕವಷ್ಟೇ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುತ್ತದೆ. ಹಾಗಾಗಿ ಆರಂಭದ ಮಳೆಯ ಕೆಸರು ನೀರು ಹೆಚ್ಚು ಎಂದರೆ ಬಂಟ್ವಾಳ ತಾಲೂಕಿನ ಶಂಭೂರು ಡ್ಯಾಂ ವರೆಗೆ ಬರಬಹುದು, ಅಲ್ಲಿಂದ ಕೆಳಗೆ ಉಕ್ಕಿ ಹರಿಯಬೇಕಾದರೆ ಇನ್ನೂ ಕೆಲದಿನಗಳು ಬೇಕಾಗಬಹುದು ಎಂಬುದು ವಾಸ್ತವ ಸತ್ಯವಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…