ಮಳೆಗಾಲ ಆರಂಭಕ್ಕೂ ಮುನ್ನ ಇದೀಗ ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಜಡಿಮಳೆಗೆ ಬಂಟ್ವಾಳ ತಾಲೂಕಿನ ಅನೇಕ ಕಡೆಗಳಲ್ಲಿ ಪಾಕೃತಿಕ ವಿಕೋಪಗಳು ಉಂಟಾಗಿದೆ.
ಆದರೆ ನೇತ್ರಾವತಿ ನದಿಯಲ್ಲಿ ಹರಿಯುವ ನೀರಿನ ಮಟ್ಟದಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬರದೆ ಯಥಾಸ್ಥಿತಿಯಲ್ಲಿ ಶಾಂತವಾಗಿಹರಿಯುತ್ತಿದೆ ಎಂದು ತಾಲೂಕು ಆಡಳಿತ ಅಧಿಕೃತ ಮಾಹಿತಿ ನೀಡಿದೆ. ನೇತ್ರಾವತಿ ನದಿಯಲ್ಲಿ ತಿಳಿ ನೀರು ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಅತಿಯಾದ ಗಾಳಿ ಮಳೆಯಾದರೆ ನೇತ್ರಾವತಿ ನೀರಿನ ಮಟ್ಟ ಹೆಚ್ಚಾಗುತ್ತದೆ. ಮತ್ತು ಕೆಸರು ಮಿಶ್ರಿತ ನೀರು ತುಂಬಿ ಹರಿಯುತ್ತದೆ.
ಆದರೆ ನೇತ್ರಾವತಿ ನದಿಯಲ್ಲಿ ಮಳೆ ನೀರು, ಕಡಲ ಒಡಲು ಸೇರುವ ಮುನ್ನ ವಾಣಿಜ್ಯ ಮತ್ತು ಕುಡಿಯುವ ನೀರಿನ ಉದ್ದೇಶದಿಂದ ಅಲ್ಲಲ್ಲಿ ಅಡ್ಡಲಾಗಿ ಕಟ್ಟಲಾದ ಡ್ಯಾಂ ಗಳ ಹೊಟ್ಟೆ ತುಂಬಬೇಕು. ಅ ಬಳಿಕವಷ್ಟೇ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುತ್ತದೆ. ಹಾಗಾಗಿ ಆರಂಭದ ಮಳೆಯ ಕೆಸರು ನೀರು ಹೆಚ್ಚು ಎಂದರೆ ಬಂಟ್ವಾಳ ತಾಲೂಕಿನ ಶಂಭೂರು ಡ್ಯಾಂ ವರೆಗೆ ಬರಬಹುದು, ಅಲ್ಲಿಂದ ಕೆಳಗೆ ಉಕ್ಕಿ ಹರಿಯಬೇಕಾದರೆ ಇನ್ನೂ ಕೆಲದಿನಗಳು ಬೇಕಾಗಬಹುದು ಎಂಬುದು ವಾಸ್ತವ ಸತ್ಯವಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…