ಮಳೆಗಾಲ ಆರಂಭಕ್ಕೂ ಮುನ್ನ ಇದೀಗ ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಜಡಿಮಳೆಗೆ ಬಂಟ್ವಾಳ ತಾಲೂಕಿನ ಅನೇಕ ಕಡೆಗಳಲ್ಲಿ ಪಾಕೃತಿಕ ವಿಕೋಪಗಳು ಉಂಟಾಗಿದೆ.
ಆದರೆ ನೇತ್ರಾವತಿ ನದಿಯಲ್ಲಿ ಹರಿಯುವ ನೀರಿನ ಮಟ್ಟದಲ್ಲಿ ಯಾವುದೇ ವ್ಯತ್ಯಾಸಗಳು ಕಂಡು ಬರದೆ ಯಥಾಸ್ಥಿತಿಯಲ್ಲಿ ಶಾಂತವಾಗಿಹರಿಯುತ್ತಿದೆ ಎಂದು ತಾಲೂಕು ಆಡಳಿತ ಅಧಿಕೃತ ಮಾಹಿತಿ ನೀಡಿದೆ. ನೇತ್ರಾವತಿ ನದಿಯಲ್ಲಿ ತಿಳಿ ನೀರು ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಅತಿಯಾದ ಗಾಳಿ ಮಳೆಯಾದರೆ ನೇತ್ರಾವತಿ ನೀರಿನ ಮಟ್ಟ ಹೆಚ್ಚಾಗುತ್ತದೆ. ಮತ್ತು ಕೆಸರು ಮಿಶ್ರಿತ ನೀರು ತುಂಬಿ ಹರಿಯುತ್ತದೆ.
ಆದರೆ ನೇತ್ರಾವತಿ ನದಿಯಲ್ಲಿ ಮಳೆ ನೀರು, ಕಡಲ ಒಡಲು ಸೇರುವ ಮುನ್ನ ವಾಣಿಜ್ಯ ಮತ್ತು ಕುಡಿಯುವ ನೀರಿನ ಉದ್ದೇಶದಿಂದ ಅಲ್ಲಲ್ಲಿ ಅಡ್ಡಲಾಗಿ ಕಟ್ಟಲಾದ ಡ್ಯಾಂ ಗಳ ಹೊಟ್ಟೆ ತುಂಬಬೇಕು. ಅ ಬಳಿಕವಷ್ಟೇ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುತ್ತದೆ. ಹಾಗಾಗಿ ಆರಂಭದ ಮಳೆಯ ಕೆಸರು ನೀರು ಹೆಚ್ಚು ಎಂದರೆ ಬಂಟ್ವಾಳ ತಾಲೂಕಿನ ಶಂಭೂರು ಡ್ಯಾಂ ವರೆಗೆ ಬರಬಹುದು, ಅಲ್ಲಿಂದ ಕೆಳಗೆ ಉಕ್ಕಿ ಹರಿಯಬೇಕಾದರೆ ಇನ್ನೂ ಕೆಲದಿನಗಳು ಬೇಕಾಗಬಹುದು ಎಂಬುದು ವಾಸ್ತವ ಸತ್ಯವಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…