ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿದ್ದು, ಇದೀಗ ಪೊಲೀಸರು ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 
ಈ ಹಿಂದೆ ಎಫ್ಐಆರ್ ರದ್ದುಗೊಳಿಸುವಂತೆ ಹರೀಶ್ ಪೂಂಜ ಹೈಕೋರ್ಟ್ ಮೊರೆ ಹೋಗಿದ್ರು. ಆದರೆ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು. ಈ ನಡುವೆ ಪೊಲೀಸರು ಶಾಸಕ ಪೂಂಜ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು ಶಾಸಕ ಹರೀಶ್ ಪೂಂಜಗೆ ಮತ್ತೊಂದು ಹಿನ್ನಡೆಯಾಗಿದೆ. ಮೇ ೨೦ರಂದು ಪ್ರಕರಣ ಸಂಬAಧ ವಾದ ಪ್ರತಿವಾದ ನಡೆದಿದ್ದು, ದೂರುದಾರ ಎಸ್.ಬಿ. ಇಬ್ರಾಹಿಂ ಅವರ ಪರವಾಗಿ ಹೈಕೊರ್ಟಿನ ಹಿರಿಯ ನ್ಯಾಯವಾದಿ ಬಾಲನ್ ವಾದಿಸಿದ್ದಾರೆ.



