ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ಕಾರುಗಳ ನಡುವೆ ಅಪಘಾತ ಸಂಭವಿಸಿ ಕಾರಿನ ಚಾಲಕ ಸೇರಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಪು ಕಡೆಯಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ಕಾರ್ನಾಡ್ ಬೈಪಾಸ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಎರೆಟಿಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಎದುರು ಭಾಗ ಸಂಪೂರ್ಣ ಜಖಂಗೊAಡಿದ್ದು ಎರೆಟಿಗ ಕಾರಿಗೆ ಹಾನಿಯಾಗಿದೆ. ಅಪಘಾತದಿಂದ ಇನ್ನೋವಾ ಕಾರಿನಲ್ಲಿದ್ದ ಪ್ರಯಾಣಿಕರಾದ ಕಾಪು ಮಜೂರು ನಿವಾಸಿಗಳಾದ ಸುಳ್ಯ ನಿವಾಸಿ ಜೈನಾಬಿ ಮತ್ತು ಮೈಮುನಾ ಹಾಗೂ ಎರೆಟಿಗ ಕಾರು ಚಾಲಕ ಸುಳ್ಯ ನಿವಾಸಿ ಪ್ರಶಾಂತ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ತೀವ್ರತೆಗೆ ಎರಟಿಗ ಕಾರು ಮಂಗಳೂರಿನತ್ತ ಮುಖ ಮಾಡಿ ನಿಂತಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಹೆದ್ದಾರಿ 66 ಕಾರ್ನಾಡ್ ಬೈಪಾಸ್ ಬಳಿ ನಿರಂತರ ಅಪಘಾತ ನಡೆಯುತ್ತಿದ್ದು ವಾಹನ ಚಾಲಕರು ಎಚ್ಚರಿಕೆಯಿಂದ ಚಲಿಸಬೇಕಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…