ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಮೇ.25ರಂದು ಸುದಾನ ವಸತಿಯುತ ಶಾಲೆಯಲ್ಲಿ `ಡೆನ್ನಾನ ಡೆನ್ನನ’ ಜಾನಪದ ಸ್ಪರ್ಧೆ

ಸಾಂಸ್ಕೃತಿಕವಾಗಿ ಮತ್ತು ಕ್ರಿಯಾಶೀಲ ಮನಸ್ಸುಗಳಿಗೆ ಮುದ ನೀಡುವ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಜಾನಪದ ಶೈಲಿಯ ಕಿರು ನಾಟಕ ಸ್ಪರ್ಧೆಯು ಮೇ.25ರಂದು ಸುದಾನ ವಸತಿಯುತ ಶಾಲೆಯಲ್ಲಿ ಮೇಳೈಸಲಿದೆ ಎಂದು ಬಿಲ್ಲವ ಸಂಘದ ಯುವವಾಹಿನಿಯ ಕಾರ್ಯಕ್ರಮ ಸಂಯೋಜಕ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಹೇಳಿದ್ದಾರೆ.

ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ ಪುತ್ತೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಸಹಯೋಗದೊಂದಿಗೆ ನಡೆಯಲಿದೆ. ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧೈಯ ಉದ್ದೇಶಗಳೊಂದಿಗೆ ರಾಜ್ಯಾದ್ಯಂತ ಯುವವಾಹಿನಿಯ 35 ಘಟಕಗಳು ಕಾರ್ಯನಿರ್ವಹಿಸುತ್ತಿದೆ. ಸಂಘದಲ್ಲಿ 4600 ಮಂದಿ ಸದಸ್ಯರಿರುವ ಯುವವಾಹಿನಿಯ ಸೇವಾ ಕಾರ್ಯಗಳಿಗೆ ಕರ್ನಾಟಕ ರಾಜ್ಯ ಸರಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರತಿ ತಂಡಗಳಿಗೆ 20 ನಿಮಿಷಗಳ ಕಾಲವಕಾಶವಿದೆ. ಕಾರ್ಯಕ್ರಮದಲ್ಲಿ ವೈವಿದ್ಯಮಯ ಉಪಹಾರ, ಭೋಜನದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದ್ರು. ಇನ್ನು ಈ ಸಂದರ್ಭದಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಅಣ್ಣಿ ಪೂಜಾರಿ, ಕಾರ್ಯದರ್ಶಿ ಶರತ್ ಕೈಪಂಗಳದೋಳ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!