ಸಾಂಸ್ಕೃತಿಕವಾಗಿ ಮತ್ತು ಕ್ರಿಯಾಶೀಲ ಮನಸ್ಸುಗಳಿಗೆ ಮುದ ನೀಡುವ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಜಾನಪದ ಶೈಲಿಯ ಕಿರು ನಾಟಕ ಸ್ಪರ್ಧೆಯು ಮೇ.25ರಂದು ಸುದಾನ ವಸತಿಯುತ ಶಾಲೆಯಲ್ಲಿ ಮೇಳೈಸಲಿದೆ ಎಂದು ಬಿಲ್ಲವ ಸಂಘದ ಯುವವಾಹಿನಿಯ ಕಾರ್ಯಕ್ರಮ ಸಂಯೋಜಕ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಹೇಳಿದ್ದಾರೆ.
ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ ಪುತ್ತೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಸಹಯೋಗದೊಂದಿಗೆ ನಡೆಯಲಿದೆ. ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧೈಯ ಉದ್ದೇಶಗಳೊಂದಿಗೆ ರಾಜ್ಯಾದ್ಯಂತ ಯುವವಾಹಿನಿಯ 35 ಘಟಕಗಳು ಕಾರ್ಯನಿರ್ವಹಿಸುತ್ತಿದೆ. ಸಂಘದಲ್ಲಿ 4600 ಮಂದಿ ಸದಸ್ಯರಿರುವ ಯುವವಾಹಿನಿಯ ಸೇವಾ ಕಾರ್ಯಗಳಿಗೆ ಕರ್ನಾಟಕ ರಾಜ್ಯ ಸರಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರತಿ ತಂಡಗಳಿಗೆ 20 ನಿಮಿಷಗಳ ಕಾಲವಕಾಶವಿದೆ. ಕಾರ್ಯಕ್ರಮದಲ್ಲಿ ವೈವಿದ್ಯಮಯ ಉಪಹಾರ, ಭೋಜನದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದ್ರು. ಇನ್ನು ಈ ಸಂದರ್ಭದಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಅಣ್ಣಿ ಪೂಜಾರಿ, ಕಾರ್ಯದರ್ಶಿ ಶರತ್ ಕೈಪಂಗಳದೋಳ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ ಉಪಸ್ಥಿತರಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…