18ನೇ ಆವೃತ್ತಿ ಐಪಿಎಲ್ ಪ್ಲೇ-ಆಫ್ ರೇಸ್ ಕೊನೆಗೊಂಡಿದೆ. ನಾಲ್ಕು ತಂಡಗಳಾದ ಆರ್ಸಿಬಿ, ಗುಜರಾತ್, ಮುಂಬೈ ಮತ್ತು ಪಂಜಾಬ್ ತಂಡಗಳು ನಾಕೌಟ್ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ. ಪ್ಲೇ ಆಫ್ ಸ್ಥಾನ ಖಚಿತಗೊಂಡರೂ ಅಗ್ರ ಎರಡು ಸ್ಥಾನಗಳ ಪೈಪೋಟಿ ಮಾತ್ರ ಇನ್ನೂ ಕೊನೆಗೊಂಡಿಲ್ಲ. ನಾಲ್ಕನೇ ಸ್ಥಾನಿಯಾಗಿರುವ ಮುಂಬೈ ತಂಡಕ್ಕೂ ಅಗ್ರ ಎರಡರಲ್ಲಿ ಸ್ಥಾನ ಪಡೆಯುವ ಅವಕಾಶವಿದೆ. ಈ ಲೆಕ್ಕಾಚಾರದ ಮಾಹಿತಿ ಹೀಗಿದೆ.
ಸದ್ಯ ಗುಜರಾತ್ ಟೈಟಾನ್ಸ್(18) ಅಗ್ರಸ್ಥಾನದಲ್ಲಿದೆ. ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಲಾ 17 ಅಂಕದೊಂದಿಗೆ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದೆ. ಈ ಮೂರು ತಂಡಗಳಿಗಿಗೂ ಇನ್ನು ಎರಡು ಪಂದ್ಯಗಳು ಬಾಕಿ ಇದೆ. ಮುಂಬೈಗೆ ಉಳಿದಿರುವುದು ಒಂದು ಪಂದ್ಯ ಮಾತ್ರ. ಈ ಪಂದ್ಯ ಗೆದ್ದರೆ ತಂಡ 18 ಅಂಕ ಕಲೆಹಾಕಲಿದೆ. ಅಗ್ರ ಎರಡನೇ ಸ್ಥಾನ ಪಡೆಯಬೇಕಿದ್ದರೆ ಈ ಅಂಕ ಮಾತ್ರ ಸಾಕಾಗುದಿಲ್ಲ. ಇಲ್ಲಿಯೂ ಕೆಲವು ಲೆಕ್ಕಾಚಾರದ ಆಟವಿದೆ.
ಮುಂಬೈ ಇಂಡಿಯನ್ಸ್ ತಂಡವು ಕೊನೆಯ ಪಂದ್ಯವನ್ನು ಗೆಲ್ಲಲೇ ಬೇಕು. ಜತೆಗೆ ಪ್ರಸ್ತುತ 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ಗುಜರಾತ್ ತಂಡ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ಕೊನೆಯ ಎರಡು ಪಂದ್ಯಗಳನ್ನು ಸೋಲಬೇಕು.
ಮತ್ತೊಂದೆಡೆ, 17 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿರುವ ಆರ್ಸಿಬಿ ತಂಡ ಸನ್ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ವಿರುದ್ಧ ತನ್ನ ಉಳಿದ ಪಂದ್ಯಗಳನ್ನು ಸೋಲಬೇಕು. ಏತನ್ಮಧ್ಯೆ, 17 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ಗೆ ಮುಂಬೈ ವಿರುದ್ಧ ಪಂದ್ಯವಿದೆ. ಇದರಲ್ಲಿ ಮುಂಬೈ ಗೆಲ್ಲಬೇಕು ಮತ್ತು ಪಂಜಾಬ್ ಡೆಲ್ಲಿ ವಿರುದ್ಧ ಸೋಲಬೇಕು. ಹೀಗಾದರೆ ಮಾತ್ರ ಮುಂಬೈಗೆ ಅಗ್ರ ಎರಡರಲ್ಲಿ ಸ್ಥಾನ ಪಡೆಯುವ ಅವಕಾಶವಿದೆ. ಆರ್ಸಿಬಿ ಮತ್ತು ಗುಜರಾತ್ ಎರಡು ಪಂದ್ಯಗಳ ಪೈಕಿ ಕನಿಷ್ಠ ಒಂದೊಂದು ಪಂದ್ಯ ಗೆದ್ದರೂ ಮುಂಬೈಗೆ ಅಗ್ರ ಎರಡು ಸ್ಥಾನ ಪಡೆಯಲು ಸಾಧ್ಯವಾಗುದಿಲ್ಲ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…