18ನೇ ಆವೃತ್ತಿ ಐಪಿಎಲ್ ಪ್ಲೇ-ಆಫ್ ರೇಸ್ ಕೊನೆಗೊಂಡಿದೆ. ನಾಲ್ಕು ತಂಡಗಳಾದ ಆರ್ಸಿಬಿ, ಗುಜರಾತ್, ಮುಂಬೈ ಮತ್ತು ಪಂಜಾಬ್ ತಂಡಗಳು ನಾಕೌಟ್ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ. ಪ್ಲೇ ಆಫ್ ಸ್ಥಾನ ಖಚಿತಗೊಂಡರೂ ಅಗ್ರ ಎರಡು ಸ್ಥಾನಗಳ ಪೈಪೋಟಿ ಮಾತ್ರ ಇನ್ನೂ ಕೊನೆಗೊಂಡಿಲ್ಲ. ನಾಲ್ಕನೇ ಸ್ಥಾನಿಯಾಗಿರುವ ಮುಂಬೈ ತಂಡಕ್ಕೂ ಅಗ್ರ ಎರಡರಲ್ಲಿ ಸ್ಥಾನ ಪಡೆಯುವ ಅವಕಾಶವಿದೆ. ಈ ಲೆಕ್ಕಾಚಾರದ ಮಾಹಿತಿ ಹೀಗಿದೆ.
ಸದ್ಯ ಗುಜರಾತ್ ಟೈಟಾನ್ಸ್(18) ಅಗ್ರಸ್ಥಾನದಲ್ಲಿದೆ. ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಲಾ 17 ಅಂಕದೊಂದಿಗೆ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದೆ. ಈ ಮೂರು ತಂಡಗಳಿಗಿಗೂ ಇನ್ನು ಎರಡು ಪಂದ್ಯಗಳು ಬಾಕಿ ಇದೆ. ಮುಂಬೈಗೆ ಉಳಿದಿರುವುದು ಒಂದು ಪಂದ್ಯ ಮಾತ್ರ. ಈ ಪಂದ್ಯ ಗೆದ್ದರೆ ತಂಡ 18 ಅಂಕ ಕಲೆಹಾಕಲಿದೆ. ಅಗ್ರ ಎರಡನೇ ಸ್ಥಾನ ಪಡೆಯಬೇಕಿದ್ದರೆ ಈ ಅಂಕ ಮಾತ್ರ ಸಾಕಾಗುದಿಲ್ಲ. ಇಲ್ಲಿಯೂ ಕೆಲವು ಲೆಕ್ಕಾಚಾರದ ಆಟವಿದೆ.
ಮುಂಬೈ ಇಂಡಿಯನ್ಸ್ ತಂಡವು ಕೊನೆಯ ಪಂದ್ಯವನ್ನು ಗೆಲ್ಲಲೇ ಬೇಕು. ಜತೆಗೆ ಪ್ರಸ್ತುತ 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ಗುಜರಾತ್ ತಂಡ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ಕೊನೆಯ ಎರಡು ಪಂದ್ಯಗಳನ್ನು ಸೋಲಬೇಕು.
ಮತ್ತೊಂದೆಡೆ, 17 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿರುವ ಆರ್ಸಿಬಿ ತಂಡ ಸನ್ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ವಿರುದ್ಧ ತನ್ನ ಉಳಿದ ಪಂದ್ಯಗಳನ್ನು ಸೋಲಬೇಕು. ಏತನ್ಮಧ್ಯೆ, 17 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ಗೆ ಮುಂಬೈ ವಿರುದ್ಧ ಪಂದ್ಯವಿದೆ. ಇದರಲ್ಲಿ ಮುಂಬೈ ಗೆಲ್ಲಬೇಕು ಮತ್ತು ಪಂಜಾಬ್ ಡೆಲ್ಲಿ ವಿರುದ್ಧ ಸೋಲಬೇಕು. ಹೀಗಾದರೆ ಮಾತ್ರ ಮುಂಬೈಗೆ ಅಗ್ರ ಎರಡರಲ್ಲಿ ಸ್ಥಾನ ಪಡೆಯುವ ಅವಕಾಶವಿದೆ. ಆರ್ಸಿಬಿ ಮತ್ತು ಗುಜರಾತ್ ಎರಡು ಪಂದ್ಯಗಳ ಪೈಕಿ ಕನಿಷ್ಠ ಒಂದೊಂದು ಪಂದ್ಯ ಗೆದ್ದರೂ ಮುಂಬೈಗೆ ಅಗ್ರ ಎರಡು ಸ್ಥಾನ ಪಡೆಯಲು ಸಾಧ್ಯವಾಗುದಿಲ್ಲ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…