ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ,ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ ಬಾಳಿಗೆ ಪ್ರೇರಕರಾಗಿ ಪ್ರಸಿದ್ಧರೆನಿಸಿದ್ದರು.ಐವತ್ತು ದಶಕಗಳ ಹಿಂದೆಯೇ ಸುಮಾರು 37 ಧರ್ನಶಿಶು (ಮಕ್ಕಳ ಪೋಷಕ) ಹೊಂದಿ ಹಿತಪೋಷಕರೆಣಿಸಿ ಶ್ರೇಷ್ಠವ್ಯಕ್ತಿವೆಂದೇ ಗುರುತಿಸಿ ಜನಾನುರೆಸಿದ್ದರು. ಬಳಿಕ ಬಂಟ್ವಾಳ ಮೊಡಂಕಾಪು ಇಲ್ಲಿನ ಇನ್ಫೆoಟ್ ಜೀಸಸ್ ಚರ್ಚ್ ನಲ್ಲಿ ಪಾಲನಾ ಸಮಿತಿ ಸದಸ್ಯರಾಗಿ,ತಿಸ್ರಿ ಒಡ್ದ್ ಇದರ ಅಧ್ಯಕ್ಷರಾಗಿ, ಕಥೋಲಿಕ್ ಸಭಾ ಇದರ ಸಕ್ರಿಯ ಸದಸ್ಯರಾಗಿ, ಕೊಡುಗೈದಾನಿಯಾಗಿ ಅನುಪಮ ಸೇವೆ ಸಲ್ಲಿಸಿದ್ದು, ಸದ್ಯ ಮಂಗಳೂರು ಬಿಕರ್ಣಕಟ್ಟೆ ಇಲ್ಲಿನ ಜಯಶ್ರೀಗೇಟ್ ನ ಸ್ವನಿವಾಸದಲ್ಲಿ ನೆಲೆಸಿದ್ದರು.
ಮೃತರು ಪತ್ನಿ, ಇಬ್ಬರು ಸುಪುತ್ರಿಯರು, ಮೂವರು ಸುಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು
ನಾಳೆ ಗುರುವಾರ (ಮೇ. 23) ಮಧ್ಯಾಹ್ನ 2:00 ಗಂಟೆಗೆ ಸ್ವನಿವಾಸಕ್ಕೆ ತಂದು ಬಳಿಕ 2:45 ರಿಂದ 3:30ರ ವರೆಗೆ ಬಜ್ಜೋಡಿ ಅಲ್ಲಿನ ಇನ್ಫೆಂಟ್ ಮೇರಿ ಚರ್ಚ್ನಲ್ಲಿ ಸಾರ್ವಜನಿಕ ವೀಕ್ಷಣೆಗೆ ಇರಿಸಲಾಗುವುದು. 3:30 ಗಂಟೆಗೆ ಪೂಜೆ, ನಂತರ ಸೈoಟ್ ಸೆಬಾಸ್ಟಿಯನ್ ಚರ್ಚ್ (ಬೆಂದೂರು) ಇದರ ಸಮಾಧಿಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…