ಉಳ್ಳಾಲ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೋರ್ವ ಇನ್ನೊಬ್ಬ ವಿದ್ಯಾರ್ಥಿಗೆ ಚೂರಿ ಇರಿದ ಘಟನೆಯೊಂದು ಉಳ್ಳಾಲದಲ್ಲಿ ವರದಿಯಾಗಿದೆ. ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಎಂಬಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ನಡುವೆ ಸಣ್ಣಪುಟ್ಟ ಮಾರಾಮಾರಿ ನಡೆದು ಓರ್ವ ವಿದ್ಯಾರ್ಥಿ ಮತ್ತೋರ್ವ ವಿದ್ಯಾರ್ಥಿಯ ಮೇಲೆ ಚಾಕು ಎಸೆದ ಘಟನೆ ಬುಧವಾರ ನಡೆದಿದೆ.
ಮಧ್ಯಾಹ್ನದ ಊಟದ ಸಮದಲ್ಲಿ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದು, ಬಟ್ಟೆಯಲ್ಲಿ ಕಲೆ ಆಯಿತೆಂದು ಕೋಪಗೊಂಡ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಯ ಕೆನ್ನೆಗೆ ಹೊಡೆದಿದ್ದಾನೆ. ಪೆಟ್ಟು ತಿಂದ ವಿದ್ಯಾರ್ಥಿ ಕ್ರೋದದಿಂದ ಬ್ಯಾಗಿನಿಂದ ಚೂರಿ ತೆಗೆದು ವಿದ್ಯಾರ್ಥಿ ಮೇಲೆ ಎಸೆದ ಪರಿಣಾಮ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಅದೃಷ್ಟವಶಾತ್ ಎದೆ ಭಾಗದಿಂದ ಸ್ವಲ್ಪ ಪಕ್ಕದಲ್ಲಿ ಚೂರಿ ತಗುಲಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನೆಯ ಮಾಹಿತಿ ಪಡೆದ ದಕ್ಷಿಣ ಉಪ ವಿಭಾಗ ಎಸಿಪಿ, ಕೊಣಾಜೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸೇರಿದಂತೆ ಅಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಭೇಟಿ ನೀಡಿ ಹುಡುಗನಿಗೆ ಬುದ್ಧಿ ಹೇಳಿ ಮನೆಗೆ ಕಳುಹಿಸಿದ್ದು ಇಂದು ತನಿಖೆ ಮುಂದುವರಿಸಿದ್ದಾರೆ. ಶಾಲೆಗೆ ಹೋಗುತ್ತಿರುವ ಹುಡುಗನಿಗೆ ಚೂರಿ ಎಲ್ಲಿಂದ ಸಿಕ್ಕಿತು ಎಂದು ಪ್ರಶ್ನಿಸಿದ್ದಕ್ಕೆ ಬಸ್ ಸ್ಟಾಂಡ್ ಬಳಿ ಬಿದ್ದು ಸಿಕ್ಕಿದ್ದು ಎಂದು ಹೇಳಿದ್ದಾನೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…