ಉಡುಪಿ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಎನ್. (59) ಅವರು ಅನಾರೋಗ್ಯದಿಂದ ನಿಧನ ಹೊಂದಿದರು.
ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು, ಕಳೆದ ಆಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪ ಅವರು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಕಾಲ ಚಿಕಿತ್ಸೆ ಪಡೆದರೂ ಅವರ ಆರೋಗ್ಯದಲ್ಲಿ ಯಾವುದೇ ಗಣನೀಯ ಚೇತರಿಕೆ ಕಂಡುಬಂದಿರಲಿಲ್ಲ. ಬುಧವಾರ ರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
2003ರಲ್ಲಿ ಉಪನಿರೀಕ್ಷಕರಾಗಿ ಸೇವೆಗೆ ನಿಯುಕ್ತಿಯಾಗಿದ್ದ ನಂಜಪ್ಪ, ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು ಬಳಿಕ ಪೊಲೀಸ್ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿಯಲ್ಲಿ ನಾಲ್ಕು ವರ್ಷಗಳ ಕಾಲ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ 2024 ಆಗಸ್ಟ್ನಲ್ಲಿ ಕುಂದಾಪುರ ಠಾಣೆ ಪೊಲೀಸ್ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದರು.
ಇಂದು ಬೆಳಿಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಎಸ್ಪಿ ಡಾ. ಅರುಣ್ ಕುಮಾರ್ ಅವರ ನೇತೃತ್ವದಲ್ಲಿ ಮೃತರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಲಾಯಿತು. ಎಎಸ್ಪಿ ಸುಧಾಕರ್ ನಾಯ್ಕ್, ಎ ಎಸ್ ಪಿ ಪರಮೇಶ್ವರ್ ಹೆಗ್ಡೆ ಹಾಗೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…